ಅನ್ನದಾನೇಶ್ವರ ಸ್ವಾಮೀಜಿ ಮಹಿಳೆ ಜತೆಗಿನ ಅಸಭ್ಯ ವರ್ತನೆಗೆ ಕಾರಣವೇನು?

ಈ ಸಂದರ್ಭದಲ್ಲೇ ಮಠದ ಸ್ವಾಮೀಜಿಯು ದಂಪತಿಯಿಂದ ಒಂದೂವರೆ ಲಕ್ಷ ರೂ. ಹಣ ಪಡೆದಿದ್ದರು. ಇದಕ್ಕೆ ಬದಲಿಯಾಗಿ ಮಠದ ಆವರಣದಲ್ಲಿ ಜಾಗ ಕಲ್ಪಿಸುವ ಮಾತು ನೀಡಿ, ಅಲ್ಲಿ ನಿರ್ಮಾಣವಾಗುತ್ತಿದ್ದ ಕಾಂಪ್ಲೆಕ್ಸ್ ನ ಉಸ್ತುವಾರಿಯನ್ನು ಪಾಟೀಲ್ ಗೇ ನೀಡುವುದಾಗಿ ಸ್ವಾಮೀಜಿ ಮಾತು ನೀಡಿದ್ದರು.
ಆದರೆ ಇದ್ಯಾವುದು ನಡೆಯದೆ ಹೋದಾಗ, ಪಾಟೀಲ್ ದಂಪತಿ ಹಣ ನೀಡುವಂತೆ ಒತ್ತಾಯಿಸಿದರು. ಈ ರೀತಿ ಹಣ ಕೇಳಲು ಹೋದಾಗಲೇ ಪಾಟೀಲರ ಮಡದಿಯ ಕೈ ಹಿಡಿದು ಎಳೆದಾಡಿದ ಸ್ವಾಮೀಜಿ ಸೀರೆಗೂ ಕೈ ಹಾಕಿದ ಎಂದು ಆರೋಪಿಸಲಾಗಿದೆ. ಜತೆಗೆ ಮಂಚ ಹಂಚಿಕೊಂಡರೇ ರಾಣಿ ಮಾಡುವೆ ಎಂದು ಸಹ ಆಕೆಯನ್ನು ಪುಸಲಾಯಿಸಿದ್ದ ಎಂದು ದೂರಿನಲ್ಲಿ ಹೇಳಲಾಗಿದೆ.












Click it and Unblock the Notifications