ಕೊಡಿಗೆಹಳ್ಳಿ ಭೂಹಗರಣ: ಅಶೋಕ್ ವಿರುದ್ಧ ಬಿತ್ತು ಮತ್ತೊಂದು ಕೇಸು

'ಬೆಂಗಳೂರು ಉತ್ತರ ತಾಲ್ಲೂಕು ವಿದ್ಯಾರಣ್ಯಪುರ ವ್ಯಾಪ್ತಿಯ ಕೊಡಿಗೆಹಳ್ಳಿಯಲ್ಲಿರುವ ಲೋಕ ಕಲ್ಯಾಣ ಪ್ರತಿಷ್ಠಾನಕ್ಕೆ ಸೇರಿದ 7 ಎಕರೆ 9 ಗುಂಟೆ ಜಾಗದ ಕೆಲವೊಂದು ದಾಖಲೆಗಳನ್ನು ತಿದ್ದಿ ಅಶೋಕ್ ತಮ್ಮ ಸಹೋದರಿಯ ಮಕ್ಕಳಾದ ಮಾರುತೀಶ್, ವಿನೋದ್ಕುಮಾರ್, ಪ್ರಶಾಂತ್ಕುಮಾರ್, ಕೆಂಪಣ್ಣ ಮತ್ತು ರಾಜಣ್ಣ ಎಂಬವರ ಹೆಸರಿಗೆ ನೋಂದಣಿ ಮಾಡಿಸಿದ್ದಾರೆ. ಇದಾದ ನಂತರ ಬಹುತೇಕ ಭೂಮಿಯನ್ನು ಬೇರೆಯವರಿಗೆ ಮಾರಾಟ ಮಾಡಿದ್ದಾರೆ' ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಟ್ರಸ್ಟ್ನ ಸದಸ್ಯರಲ್ಲಿ ಒಬ್ಬರಾದ ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್ಕುಮಾರ್ ಅವರು ಇದಕ್ಕೆ ಸಹಕರಿಸಿದ್ದು, ಭೂಮಿ ಪರಭಾರೆಯಾಗಲು ಅವರೂ ಕಾರಣರಾಗಿದ್ದಾರೆ.
ಈ ಟ್ರಸ್ಟ್ನ ಸದಸ್ಯರಾದ ಮಾಜಿ ಶಾಸಕ ರಮೇಶ್ ಕುಮಾರ್ ಅವರಿಂದ ಜಾಗವನ್ನು ಖರೀದಿಸಿರುವಂತೆ ದಾಖಲೆಗಳನ್ನು ಸೃಷ್ಟಿಸಲಾಗಿದೆ. ಸರ್ವೆ ನಂ.162/1, 163/1, 163/2 ಮತ್ತು 164/7ಕ್ಕೆ ಸೇರಿದ ಈ ಜಾಗದ ಒಟ್ಟು ಮೌಲ್ಯ 175 ಕೋಟಿ ರೂಪಾಯಿ. ಅಲ್ಲಿ ಈಗ ಅಪಾರ್ಟ್ಮೆಂಟ್ಗಳನ್ನು ಕಟ್ಟಿಸಲಾಗುತ್ತಿದೆ ಎಂದು ಜಗದೀಶ್ ಕುಮಾರ್ ದೂರಿದ್ದಾರೆ.
ರಾಜ್ಯಪಾಲರ ಕಾರ್ಯದರ್ಶಿ, ಬೆಂಗಳೂರು ನಗರ ಜಿಲ್ಲಾಧಿಕಾರಿ, ಯಲಹಂಕ ತಹಶೀಲ್ದಾರ್ ಅವರಿಗೆ ಈಗಾಗಲೇ ದೂರು ನೀಡಲಾಗಿದೆ. ಇದರ ಜತೆಗೆ ಲೋಕಾಯುಕ್ತಕ್ಕೂ ದೂರು ನೀಡಿದ್ದೇನೆ. ಈ ಕುರಿತು ಅಶೋಕ್ ವಿರುದ್ದ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸುವುದಾಗಿ ಜಗದೀಶ್ ಕುಮಾರ್ ತಿಳಿಸಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications