ಕಪ್ಪು ಹಣ ಜನಸಾಮಾನ್ಯರಿಗೆ ಹಂಚಿದ ಪೋಸ್ಟ್ ಆಫೀಸ್

ಖಾತೆ ತೆರೆಯಲು ಹಾತೊರೆಯಲು ಮೂರು ಮೂರು ವದಂತಿಗಳು ಇದ್ದವು. ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಭ್ರಷ್ಟಾಚಾರದ ವಿರುದ್ಧ ಹೋರಾಡಿದ ಫಲವಾಗಿ ಕೇಂದ್ರ ಸರ್ಕಾರವು ಸ್ವಿಸ್ ಬ್ಯಾಂಕಿನಲ್ಲಿ ಭಾರತೀಯರು ಇಟ್ಟಿರುವ ಕಪ್ಪು ಹಣ ಭಾರತಕ್ಕೆ ವಾಪಸಾಗಲಿದ್ದು, ಇದರಲ್ಲಿ ಹಳ್ಳಿಗಳ ಪ್ರತಿಯೊಂದು ಕುಟುಂಬಕ್ಕೆ ತಲಾ 30 ಸಾವಿರ ರೂಪಾಯಿ ಜಮೆ ಆಗಲಿದೆ. ಆದರೆ ಅದಕ್ಕಾಗಿ ಅಂಚೆ ಕಚೇರಿಯಲ್ಲಿ ಖಾತೆ ತೆರೆಯಬೇಕಾಗುತ್ತದೆ ಎಂಬುದು ಮೊದಲನೇ ವದಂತಿಯಾಗಿತ್ತು.
ಯೋಗ ಗುರು ಬಾಬಾ ರಾಮದೇವ್ ಅವರು ವಿದೇಶಿ ಬ್ಯಾಂಕುಗಳಿಂದ ಇಲ್ಲಿಗೆ ಬರಲಿರುವ ಕಪ್ಪು ಹಣವನ್ನು ಪ್ರತಿಯೊಂದು ಕುಟುಂಬದ ಅಂಚೆ ಖಾತೆಗೆ ತಲಾ 3 ಲಕ್ಷದಂತೆ ಜಮೆ ವ್ಯವಸ್ಥೆ ಮಾಡಲಿದ್ದಾರೆ ಎಂಬುದು ಎರಡನೇ ವದಂತಿಯಾಗಿತ್ತು.
ಮೂರನೇ ವದಂತಿ: ಕೇಂದ್ರ ಸರ್ಕಾರವು ಪಡಿತರ ವಿತರಣೆ ವ್ಯವಸ್ಥೆಯನ್ನು ರದ್ದುಗೊಳಿಸಿ ಪ್ರತಿಯೊಂದು ಖಾತೆಗೆ ತಲಾ 5 ಸಾವಿರ ರೂಪಾಯಿ ಜಮೆ ಮಾಡಲಾಗುವುದು ಮತ್ತು ಪ್ರತಿ ತಿಂಗಳಿಗೆ 10 ಸಾವಿರ ರೂಪಾಯಿ ಜಮೆ ಮಾಡಲಾಗುವುದು.
ಆದ್ದರಿಂದ ಪ್ರತಿಯೊಂದು ಬಿಪಿಎಲ್ ಕಾರ್ಡುದಾರರು ಅಂಚೆ ಕಚೇರಿಯಲ್ಲಿ ಖಾತೆ ತರೆರೆಯಬೇಕು ಎಂದು ಕೆಲವರು ಸುದ್ದಿ ಹಬ್ಬಿಸಿದ್ದರು.
ಅಂಚೆ ಕಚೇರಿಯಲ್ಲಿ 50 ರೂಪಾಯಿ ಹಾಗೂ ಒಂದು ಭಾವಚಿತ್ರ ಸಲ್ಲಿಸಿ ಅರ್ಜಿಗಳನ್ನು ಪಡೆದು ಖಾತೆ ತೆರೆಯಬೇಕಾಗಿತ್ತು. 50 ಖರ್ಚು ಮಾಡಿ ಅಪಾರ ಹಣ ಸಿಗುವ ನಿರೀಕ್ಷೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಅಂಚೆ ಕಚೇರಿಗ ನುಗ್ಗಿದ್ದರು.
ಕಪ್ಪುಹಣದ ಬಗ್ಗೆ ಯಾವುದೇ ಮಾಹಿತಿ ಇಲ್ಲದಿದ್ದರೂ ಬಿಪಿಎಲ್ ಚೀಟಿದಾರರಿಗೆ ಅಂಗಡಿಗಳಲ್ಲಿ ಪಡಿತರ ವಿತರಿಸುವ ಬದಲು, ಹಣ ಕೊಡುವ ಪ್ರಸ್ತಾವ ಇದೆ, ಆದರೆ ಭಾರೀ ಮೊತ್ತದ ಹಣ ಬರುವ ಸಾಧ್ಯತೆಯೂ ಇಲ್ಲ ಎಂದು ಅಂಚೆ ಕಚೇರಿ ಮುಖ್ಯಸ್ಥರು ತಿಳಿ ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications