ಶಾಸಕ ವೈ ಸಂಪಂಗಿ ಜಾಮೀನು ರದ್ದು, ಮತ್ತೆ ಜೈಲಿಗೆ

ವೈ ಸಂಪಂಗಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸುವಂತೆ ನ್ಯಾಯಾಧೀಶ ಎನ್ ಕೆ ಸುಧೀಂದ್ರ ರಾವ್ ಅವರು ಆದೇಶಿಸಿದ್ದಾರೆ. ಹೀಗಾಗಿ ದೀಪಾವಳಿ ರಜೆ ಅನುಭವಿಸುತ್ತಿರುವ ಪರಪ್ಪನ ಅಗ್ರಹಾರದ ವಿವಿಐಪಿ ಕೈದಿಗಳ ಪಟ್ಟಿಯಲ್ಲಿ ಸಂಪಂಗಿ ಸಹ ಸೇರಲಿದ್ದಾರೆ.
ಕ್ಲೀನ್ ಚೀಟ್ ಪಡೆದಿದ್ದ ವೈ ಸಂಪಂಗಿ ಅವರಿಂದ ಬೆದರಿಕೆ ಕರೆ ಬಂದಿರುವುದಾಗಿ ಪ್ರಕರಣದ ಸಾಕ್ಷಿದಾರ ಹುಸೇನ್ ಮೊಯಿನ್ ಫರೂಕ್ ಅವರು ದೂರು ನೀಡಿದ್ದರು.
ದೂರು ಅರ್ಜಿಯ ವಿಚಾರಣೆ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯ, ಜಾಮೀನು ರದ್ದು ಪಡಿಸಿ, ಸಾಕ್ಷಿಗಳ ವಿಚಾರಣೆ ಪೂರ್ಣಗೊಳ್ಳುವವರೆಗೂ ಶಾಸಕ ಸಂಪಂಗಿ ಅವರನ್ನು ನ್ಯಾಯಾಂಗ ಬಂಧನದಲ್ಲಿಡುವಂತೆ ನ್ಯಾ. ಸುಧೀಂದ್ರ ರಾವ್ ಅವರು ಆದೇಶ ನೀಡಿದ್ದಾರೆ. ಸಾಕ್ಷಿಗಳ ವಿಚಾರಣೆ ಶನಿವಾರ ಅ.28ರಂದು ನಡೆಯಲಿದೆ.
ಏನಿದು ಪ್ರಕರಣ?: ಕೆಜಿಎಫ್ ನಲ್ಲಿ ಕಟ್ಟಡ ನಿರ್ಮಾಣ ವಿಷಯದಲ್ಲಿ ಅಯೂಬ್ ಹಾಗೂ ಫರೂಕ್ ಅವರಿಗೆ ವ್ಯಾಜ್ಯ ನಡೆದಿತ್ತು. ಒತ್ತಡಕ್ಕೆ ಒಳಗಾಗಿ ಅಯೂಬ್ ಅವರು ವಿಷ ಸೇವಿಸಿ ಆಸ್ಪತ್ರೆ ಸೇರಿಸಿದ್ದರು. ಇದರಿಂದ ಫರೂಕ್ ಅವರ ಕ್ರಿಮಿನಲ್ ಕೇಸ್ ದಾಖಲಾಗಿತ್ತು.
ಕೇಸ್ ನಿಂದ ಬಚಾವಾಗಲು ಶಾಸಕರ ಸಹಾಯ ಬಯಸಿ, 5 ಲಕ್ಷ ನೀಡಲು ಮುಂದಾಗಿದ್ದರು. ನಂತರ 50 ಸಾವಿರ ರು ನಗದು ಹಾಗೂ 4.5 ಲಕ್ಷ ರು ಮೊತ್ತದ ಚೆಕ್ ಹಿಡಿದು ಕೊಂಡು ಶಾಸಕರ ಕಚೇರಿ ಹೊಕ್ಕ ಫರೂಕ್, ಶಾಸಕ ಸಂಪಂಗಿ ಅವರಿಗೆ ಲಂಚ ನೀಡುತ್ತಿದ್ದಾಗ ಅಂದಿನ ಲೋಕಾಯುಕ್ತ ಎನ್ ಸಂತೋಷ್ ಹೆಗ್ಡೆ ಅವರ ತಂಡ ಶಾಸಕರನ್ನು ತಮ್ಮ ಬಲೆಯಲ್ಲಿ ಕೆಡವಿಕೊಂಡಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications