ನಿರಾಣಿ ವಿರುದ್ಧ ಎಫ್ಐಆರ್ ದಾಖಲಿಸಲು ವಿಳಂಬವೇಕೆ?

ಕೈಗಾರಿಕಾ ಸಚಿವ ಮರುಗೇಶ್ ನಿರಾಣಿ ವಿರುದ್ಧ ಎಫ್ಐಆರ್ ದಾಖಲಿಸಲು ಸೋಮವಾರವೇ ಆದೇಶ ಹೊರಬಿದ್ದರೂ ಲೋಕಾಯುಕ್ತ ಪೊಲೀಸರು ವಿಳಂಬ ಮಾಡಿದ್ದು ಇದೇ ಸಕಾರಣಕ್ಕೆ. ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಕೊರತೆಯಂದಾಗಿ ನಿರಾಣಿ ವಿರುದ್ಧ ಪ್ರಕರಣದಲ್ಲಿ ತನಿಖಾಧಿಕಾರಿಯ ನೇಮಕ ವಿಷಯದಲ್ಲಿ ಸ್ವಲ್ಪ ವಿಳಂಬವಾಗಿದೆ.
ಡಿವೈಎಸ್ಪಿ ಶ್ರೇಣಿಯ ಅಧಿಕಾರಿಯೇ ಖಾಸಗಿ ದೂರಿನ ಪ್ರಕರಣದ ತನಿಖೆ ನಡೆಸಬೇಕು ಎಂದು ಲೋಕಾಯುಕ್ತ ಸಂಸ್ಥೆಯು ಇತ್ತೀಚೆಗೆ ಮಹತ್ವದ ನಿರ್ಧರ ತೆಗೆದುಕೊಂಡಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ಬರೋಬ್ಬರಿ 9 ಎಸ್ಪಿ, 5 ಡಿವೈಎಸ್ಪಿ ಮತ್ತು 6 ಇನ್ಸ್ಪೆಕ್ಟರ್ ಹುದ್ದೆಗಳು ಖಾಲಿ ಉಳಿದಿವೆ! ಪ್ರಸ್ತುತ 4 ಮಂದಿ ಡಿವೈಎಸ್ಪಿಗಳಿದ್ದು, ಅವರೆಲ್ಲಾ ಈಗಾಗಲೇ ಅತಿರಥ ಮಹಾರಥರ ವಿರುದ್ಧದ ಪ್ರಕರಣಗಳ ತನಿಖೆ ನಡೆಸುತ್ತಿದ್ದಾರೆ.
ಯಡಿಯೂರಪ್ಪ ವಿರುದ್ಧದ ಭದ್ರಾ ಮೇಲ್ದಂಡೆ ಗುತ್ತಿಗೆ ಮಂಜೂರು ಅವ್ಯವಹಾರ ಪ್ರಕರಣವನ್ನು ಲೋಕಾಯುಕ್ತ ಡಿವೈಎಸ್ಪಿ ಎಸ್. ಗಿರೀಶ್ ನಡೆಸುತ್ತಿದ್ದರೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪುತ್ರ ಬಾಲಕೃಷ್ಣೇಗೌಡ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಪ್ರಕರಣವನ್ನು ಡಿವೈಎಸ್ಪಿ ಪ್ರಸನ್ನ ವಿ. ರಾಜು ತನಿಖೆ ನಡೆಸುತ್ತಿದ್ದಾರೆ.
ಡಿವೈಎಸ್ಪಿ ಅಬ್ದುಲ್ ಅಹದ್ ಕೂಡ ಗೃಹ ಸಚಿವ ಆರ್. ಅಶೋಕ್ ವಿರುದ್ಧ ಡಿನೋಟಿಫಿಕೇಷನ್ ಪ್ರಕರಣದ ತನಿಖೆ ನಡೆಸುತ್ತಿದ್ದು, ಮತ್ತೊಬ್ಬ ಡಿವೈಎಸ್ಪಿ ಮಂಜು ನಾಥ್ ಹಲವು ಮಹತ್ವದ ಪ್ರಕರಣಗಳ ತನಿಖೆ ನಡೆಸುತ್ತಿದ್ದಾರೆ.
ಆದರೆ, ಈ ಲೋಕಾಯುಕ್ತ ವಿಶೇಷ ಕೋರ್ಟ್ ನಿರಾಣಿ ವಿರುದ್ಧ ಪ್ರಕರಣದ ತನಿಖೆಯನ್ನು ನ. 16ರೊಳಗೆ ತನಿಖೆ ಪೂರ್ಣಗೊಳಿಸಿ ವರದಿ ನೀಡಲು ತಾಕೀತು ಮಾಡಿದೆ. ಇದೇ ವೇಳೆ ಯಡಿಯೂರಪ್ಪ, ಆರ್.ಅಶೋಕ್ ಮತ್ತು ಬಾಲಕೃಷ್ಣೇ ಗೌಡ ವಿರುದ್ಧ ಪ್ರಕರಣಗಳ ವರದಿಯನ್ನು ವಿಳಂಬ ಮಾಡದಂತೆ ಕೋರ್ಟ್ ತಾಕೀತು ಮಾಡಿದೆ.
ಈ ಹಿನ್ನೆಲೆಯಲ್ಲಿ ನಿರಾಣಿಯಂತಹ ಪ್ರಭಾವಿಗಳ ವಿರುದ್ಧ ತ್ವರಿತ ಹಾಗೂ ಸ್ವತಂತ್ರ ತನಿಖೆ ನಡೆಸಬೇಕಾದ ಅಗತ್ಯವಿದ್ದು, ತನಿಖಾಧಿಕಾರಿಗಳಿಗೆ ಇತರ ಪ್ರಕರಣಗಳ ಒತ್ತಡ ಇರಕೂಡದು. ಹೀಗಾಗಿ ನಿರಾಣಿ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲು ಸ್ವಲ್ಪ ವಿಳಂವಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications