ಬಹುಮುಖ ಪ್ರತಿಭೆಯ ಎಂವೈ ಘೋರ್ಪಡೆ ವಿಧಿವಶ

ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎಂವೈ ಘೋರ್ಪಡೆಯವರ ಪಾರ್ಥೀವ ಶರೀರವನ್ನು ನಗರದ ಆರ್.ಎಂ.ವಿ. ಬಡಾವಣೆಯಲ್ಲಿರುವ ಅವರ ಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗಾಗಿ ಇಡಲಾಗುವುದು. ನಂತರ ಅವರ ಶರೀರವನ್ನು ಬಳ್ಳಾರಿ ಜಿಲ್ಲೆಯ ಸಂಡೂರಿಗೆ ತೆಗೆದುಕೊಂಡು ಹೋಗಲಾಗುವುದು ಎಂದು ತಿಳಿದುಬಂದಿದೆ.
ಘೋರ್ಪಡೆಯವರು ದೇವರಾಜ್ ಅರಸು ಅವರ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು. ನಂತರ ಎಸ್.ಎಂ.ಕೃಷ್ಣ ಅವರ ಸಂಪುಟದಲ್ಲಿ ಪಂಚಾಯತ್ ರಾಜ್ ಸಚಿವರಾಗಿದ್ದರು. ಸಂಡೂರು ಮ್ಯಾಂಗನೀಸ್ ಮತ್ತು ಕಬ್ಬಣ ಅದಿರು (ಸ್ಮಯೋರ್) ಕಾರ್ಖಾನೆ ಮಾಲಿಕರಾಗಿದ್ದ ಘೋರ್ಪಡೆಯವರು ಕೆಲವರ್ಷಗಳಿಂದ ರಾಜಕೀಯವಾಗಿ ತಟಸ್ಥರಾಗಿದ್ದರು.
ಅತ್ಯಂತ ಸಂಭಾವಿತ ವ್ಯಕ್ತಿತ್ವದವರಾಗಿದ್ದ ಘೋರ್ಪಡೆಯವರು ರಾಜಕೀಯವಾಗಿ ಅಂತಹ ಮಹತ್ವಾಕಾಂಕ್ಷಿಯಾಗಿರಲಿಲ್ಲ. ಬಾಯಿಯಲ್ಲಿ ಚಿನ್ನದ ಚಮಚ ಇಟ್ಟುಕೊಂಡೇ ಹುಟ್ಟಿದ್ದ ಎಂವೈ ಘೋರ್ಪಡೆಯವರು ಶಾಸಕರಾಗಿ, ಸಂಸದರಾಗಿ ವಿಭಿನ್ನ ಹುದ್ದೆಗಳನ್ನು ಅಲಂಕರಿಸಿದ್ದರೂ, ರಾಜಕೀಯಕ್ಕಿಂತ ಛಾಯಾಗ್ರಹಣ ಕ್ಷೇತ್ರದಲ್ಲಿ ಮಿಂಚಿದ್ದೇ ಹೆಚ್ಚು.
ಆದರ್ಶ ಮತ್ತು ಕ್ರಿಯಾಶೀಲತೆಯನ್ನೇ ಬದುಕಾಗಿಸಿಕೊಂಡಿದ್ದ ಅವರು ಜಗತ್ತಿನ ಅತ್ಯಂತ ಹಳೆಯದಾದ ಲಂಡನ್ ರಾಯಲ್ ಫೋಟೋಗ್ರಫಿಕ್ ಸಂಸ್ಥೆಯ ಸದಸ್ಯರಾಗಿದ್ದರು. ಘೋರ್ಪಡೆಯವರ ಕಪ್ಪುಬಿಳುಪು ವನ್ಯಜೀವಿ ಛಾಯಾಚಿತ್ರಗಳು ಅಂತಾರಾಷ್ಟ್ರೀಯ ಮನ್ನಣೆ ಗಳಿಸಿದ್ದವು. ವನ್ಯಜೀವಿ ಛಾಯಾಚಿತ್ರಕಲೆಯ ಬಗ್ಗೆ ಪುಸ್ತಕವನ್ನೂ ಅವರು ಬರಿದಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications