ಕಳಂಕಿತ ಸಚಿವರೂ ಬಸವನಗುಡಿ ವೇದಿಕೆಯಲ್ಲಿ ರಾರಾಜಿಸಲಿದ್ದಾರೆ!

'ಸಮಾವೇಶದ ವೇದಿಕೆಯಲ್ಲಿ ರಾಜ್ಯ ಸಚಿವ ಸಂಪುಟದ ಎಲ್ಲ ಸದಸ್ಯರೂ ಉಪಸ್ಥಿತರಿರುತ್ತಾರೆ'ಎಂದು ಸಭೆಯ ಉಸ್ತುವಾರಿ ಹೊತ್ತಿರುವ ಸಂಸದ ಪ್ರಹ್ಲಾದ ಜೋಷಿ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ, ಭೂ ಹಗರಣದಲ್ಲಿ ತಾಜಾ ಆರೋಪಿಗಳಾಗಿರುವ ಗೃಹ ಸಚಿವ ಅಶೋಕ್ ಮತ್ತು ಕೈಗಾರಿಕೆ ಸಚಿನ ಮುರುಗೇಶ್ ನಿರಾಣಿ ಅವರುಗಳು ವೇದಿಕೆ ಹಂಚಿಕೊಳ್ಳುವುದು ಖಚಿತವಾಗಿದೆ.
ಇವರ ಜೊತೆ ಸ್ಥಳೀಯ ಸಂಸದರು, ಪಕ್ಷದ ರಾಜ್ಯ ಘಟಕದ ಪದಾಧಿಕಾರಿಗಳು, ಬೆಂಗಳೂರು ಮೇಯರ್ ಮತ್ತು ಉಪ ಮೇಯರ್ ಕೂಡ ಅಡ್ವಾಣಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
ಈ ಮಧ್ಯೆ, ಭಾನುವಾರ ಸಂಜೆ 5 ಗಂಟೆಗೆ ಆರಂಭವಾಗಲಿರುವ ಸಮಾವೇಶದ ಆಗುಹೋಗುಗಳನ್ನು ಇಂಟರ್ನೆಟ್ ಮೂಲಕ ನೇರ ಪ್ರಸಾರ ಮಾಡಲು ರಾಜ್ಯ ಬಿಜೆಪಿಯ ಮಾಹಿತಿ ತಂತ್ರಜ್ಞಾನ ಘಟಕದ ಸದಸ್ಯರು ಸಿದ್ಧತೆ ಮಾಡಿಕೊಂಡಿದ್ದಾರೆ. ಪಕ್ಷದ ವೆಬ್ ಸೈಟ್ (http://bjpkarnataka.org) ಮೂಲಕ ಜಗತ್ತಿನ ಯಾವುದೇ ಪ್ರದೇಶದಿಂದ ಬೆಂಗಳೂರಿನ ಸಮಾವೇಶ ವೀಕ್ಷಿಸುವ ಅವಕಾಶ ಕಲ್ಪಿಸಲಾಗಿದೆ.
ಅದ್ದೂರಿ ಸ್ವಾಗತ: ಕೇರಳದ ಕೊಚ್ಚಿಯಿಂದ ವಿಶೇಷ ವಿಮಾನದ ಮೂಲಕ ಭಾನುವಾರ ಸಂಜೆ ನಾಲ್ಕು ಗಂಟೆಗೆ ಇಲ್ಲಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅಡ್ವಾಣಿ ಅವರಿಗೆ ಮಹದೇವಪುರ ಮತ್ತು ಸಿ.ವಿ. ರಾಮನ್ ನಗರದ ಬಿಜೆಪಿ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಲಿದ್ದಾರೆ.
ಅಡ್ವಾಣಿ ಅವರ ಮಹತ್ವಾಕಾಂಕ್ಷೆಯ ಜನ ಚೇತನ ರಥಯಾತ್ರೆ ನಿಮಿತ್ತ ನಡೆಯಲಿರುವ ಬಹಿರಂಗ ಸಮಾವೇಶಕ್ಕೆ ಉದ್ಯಾನ ನಗರಿ ಸಕಲ ರೀತಿಯಲ್ಲೂ ಸಜ್ಜುಗೊಳ್ಳುತ್ತಿದೆ. ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಕೇಸರಿ ಬಾವುಟ ಮತ್ತು ಅಡ್ವಾಣಿಯವರಿಗೆ ಸ್ವಾಗತ ಕೋರುವ ಕಟೌಟ್ಗಳನ್ನು ಹಾಕಲಾಗಿದೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications