ವೈ ಸಂಪಂಗಿಗೆ ಬೇಲು, ಯಡಿಯೂರಪ್ಪ ಕಂಗಾಲು

ವಿಚಾರಣೆ ಮುಗಿಯುವವರೆಗೆ ದೇಶ ಬಿಟ್ಟು ಹೋಗಬಾರದು ಮತ್ತು ಪಾಸ್ಪೋರ್ಟನ್ನು ಪೊಲೀಸರ ವಶಕ್ಕೆ ಒಪ್ಪಿಸಬೇಕು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಮತ್ತು ದಾಖಲೆ ನಾಶ ಮಾಡಲು ಯತ್ನಿಸಬಾರದು ಎಂಬ ಷರತ್ತಿನಡಿ ಅವರಿಗೆ ನ್ಯಾಯಾಧೀಶ ಎನ್.ಕೆ. ಸುಧೀಂದ್ರರಾವ್ ಅವರು ಜಾಮೀನು ನೀಡಿದರು.
ಅಕ್ಟೋಬರ್ 28ರಂದು ಸಂಪಂಗಿ ಅವರ ಜಾಮೀನನ್ನು ರದ್ದುಪಡಿಸಿ ಸುಧೀಂದ್ರರಾವ್ ಅವರು ಸಂಪಂಗಿ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಅಟ್ಟಿದ್ದರು. ಹೀಗಾಗಿ, ಸಂಪಂಗಿಯವರು ಮೂರು ದಿನಗಳ ಕಾಲ ಸೆಂಟ್ರಲ್ ಜೈಲಿನಲ್ಲಿ ಯಡಿಯೂರಪ್ಪ ಜೊತೆ ಮಿನರಲ್ ವಾಟರ್ ಕುಡಿಯುವಂತಾಗಿತ್ತು. ಈಗ ಮುಂದಿನ ವಿಚಾರಣೆಯನ್ನು ನ.15ಕ್ಕೆ ಮುಂದೂಡಲಾಗಿದೆ.
ಯಡಿಯೂರಪ್ಪ ಜಾಮೀನು ವಿಚಾರಣೆ : ದೀಪಾವಳಿಯನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕತ್ತಲೆಯಲ್ಲೇ ಕಳೆದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕನ್ನಡ ರಾಜ್ಯೋತ್ಸವದಂದು ಕೂಡ ಕನ್ನಡ ಬಾವುಟವನ್ನು ಜೈಲಲ್ಲೇ ಹಾರಿಸುವಂತಾಗಿದೆ. ಅವರ ಡಿನೋಟಿಫಿಕೇಷನ್ ಗೆ ಸಂಬಂಧಿಸಿದ ಕೇಸಿನಲ್ಲಿ ಜಾಮೀನು ಅರ್ಜಿ ವಿಚಾರಣೆಯನ್ನು ನ.2ಕ್ಕೆ ಹೈಕೋರ್ಟ್ ಮುಂದೂಡಿದೆ.
ಅಕ್ಟೋಬರ್ 15ರಂದು ಬಂಧಿತರಾಗಿ ಅ.16ರಂದು ಎದೆನೋವು ಕಾಣಿಸಿಕೊಂಡು ಆಸ್ಪತ್ರೆ ಸೇರಿದ್ದ ಯಡಿಯೂರಪ್ಪ ಇನ್ನೆರಡು ದಿನ (ಜಾಮೀನು ಸಿಗುವವರೆಗೆ) ಜೈಲಿನಲ್ಲೇ ಕಳೆಯಬೇಕಾಗಿದೆ. ಕಟ್ಟಾ ಸುಬ್ರಮಣ್ಯ ನಾಯ್ಡು ಅವರಿಗೆ ಹೈಕೂರ್ಟ್ ಇಂದು ಜಾಮೀನು ಮಂಜೂರು ಮಾಡಿ, ಕ್ಯಾನ್ಸರ್ ಚಿಕಿತ್ಸೆಗೆ ವಿದೇಶಕ್ಕೆ ತೆರಳಲು ಅನುವು ಮಾಡಿಕೊಟ್ಟಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications