ಕನ್ನಡ ಶಿಕ್ಷಣ ಅನ್ನುವುದು ಲಾಭ-ನಷ್ಟದ ವ್ಯಾಪಾರವೇ?!

ಇನ್ನೂ ಮುಂದೆವರೆದು, ಸ್ಪರ್ಧಾತ್ಮಕ ಶಿಕ್ಷಣದ ಕಡೆಗೆ ಮಕ್ಕಳ ಮನಸ್ಸು ಒಲಿಯುತ್ತಿದೆ ಅನ್ನುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ಅಂತಹದೊಂದು ಶಿಕ್ಷಣ ಕೊಡಲಾಗುವುದಿಲ್ಲ, ಅಂತಹ ಶಿಕ್ಷಣ ಬೇಕಿದ್ದರೆ ಖಾಸಗಿ ಶಾಲೆಗಳಿಗೆ ಹೋಗಿ ಎಂದು ಸರ್ಕಾರವೇ ಒಪ್ಪಿಕೊಳ್ಳುತ್ತಿರುವುದು ಎಲ್ಲ ವರ್ಗದ ಕನ್ನಡಿಗರ ಕಲಿಕೆಯ ಅಗತ್ಯಗಳನ್ನು ಪೂರೈಸುವ ಬಗ್ಗೆ ಈ ಸರ್ಕಾರಕ್ಕೆ ಎಷ್ಟರ ಮಟ್ಟಿಗಿನ ಬದ್ಧತೆ, ಯೋಗ್ಯತೆ ಇದೆ ಅನ್ನುವ ಪ್ರಶ್ನೆ ಹುಟ್ಟಿಸುವುದಿಲ್ಲವೇ?
ಸರ್ಕಾರಿ ಶಿಕ್ಷಣ ಕಳಪೆ, ಖಾಸಗಿ ಇಂಗ್ಲಿಷ್ ಶಿಕ್ಷಣವೇ ಶ್ರೇಷ್ಟ ಅನ್ನುವ ಕೆಲವು ಖಾಸಗಿ ಮಾರುಕಟ್ಟೆ ಶಕ್ತಿಗಳ ನಿಲುವನ್ನೇ ಸರ್ಕಾರ ಪ್ರತಿಪಾದಿಸುವುದು ಕನ್ನಡ ಮಾಧ್ಯಮ ಶಿಕ್ಷಣದ ಸಮಾಧಿಯನ್ನೇ ಕಟ್ಟುವ ದಿನಗಳನ್ನು ತಂದೀತು.
ಇದೇ ರೀತಿ ಸರ್ಕಾರಿ ಶಾಲೆಗಳನ್ನು ಬೇಕಾಬಿಟ್ಟಿ ಅಂಬಂತೆ ನಡೆಸುತ್ತ ಹೋದಲ್ಲಿ ಇವತ್ತು ಮೂರು ಸಾವಿರ ಮುಚ್ಚಿದವರೂ ನಾಳೆ ಎಲ್ಲ ಶಾಲೆಗಳನ್ನು ಮುಚ್ಚಿ ಬೇಕಾದ್ರೆ ಖಾಸಗಿ ಶಾಲೆಗೆ ಹೋಗಿ, ಇಲ್ಲ ಮನೇಲಿ ಬೆಚ್ಚಗೆ ಮಲ್ಕೊಳ್ಳಿ, ನಾವೇನು ಮಾಡೋಕಾಗಲ್ಲ ಅನ್ನುವ ಉಡಾಫೆಯ ನಿಲುವು ತಳೆದರೂ ಅಚ್ಚರಿಯಿಲ್ಲ.
ಎಂದಿಗೂ ಹಿಂಪಡೆಯಲಾಗದ ( irreversible) ಬದಲಾವಣೆ
ಸರ್ಕಾರಿ ಶಾಲೆಗಳನ್ನು ಮುಚ್ಚುವುದು, ಇರುವ ಶಾಲೆಗಳನ್ನು ಮುಚ್ಚಿ ಹೋಬಳಿಗೊಂದು ಇಂಗ್ಲಿಷ್ ಮಾಧ್ಯಮ ಶಾಲೆ ಮಾಡ್ತೀವಿ ಅನ್ನುವುದು, ಪಾಲಿಕೆ ಶಾಲೆಗಳನ್ನು ಸಿ.ಬಿ.ಎಸ್.ಈ ತೆಕ್ಕೆಗೆ ದೂಡಿ ಧನ್ಯತಾ ಭಾವ ಅನುಭವಿಸುವುದು, ತಮ್ಮ ಸಿದ್ಧಾಂತವನ್ನು ಯಾವ ಯಾವುದೋ ರೂಪದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ತೂರಿಸುವ ಪ್ರಯತ್ನ ಮಾಡುವುದು ಹೀಗೆ ಚಿತ್ರ ವಿಚಿತ್ರ ಪ್ರಯೋಗಗಳನ್ನು ಮಾಡುತ್ತಿರುವ ಸರ್ಕಾರದ ಕ್ರಮ ಮುಂದಿನ ದಿನಗಳಲ್ಲಿ ಕನ್ನಡ ಸಮಾಜದ ಮೇಲೆ ಮಾಡಬಹುದಾದ ಪರಿಣಾಮ ಎಂತಹುದು?
ಮುಂದಿನ ಪುಟದಲ್ಲಿ ಮುಂದುವರೆದಿದೆ..
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications