Get Updates
Get notified of breaking news, exclusive insights, and must-see stories!

ಬೆಚ್ಚಿಬೀಳಿಸುವ ಭವಿಷ್ಯ ನುಡಿದ ಕೋಡಿಮಠ ಶ್ರೀಗಳು

Prediction by Kodimatha Swamiji
ಚನ್ನರಾಯಪಟ್ಟಣ, ನ. 2 : ಭವಿಷ್ಯ ಹೇಳುವುದರಲ್ಲಿ ನಿಸ್ಸೀಮರಾಗಿರುವ ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ರಾಜ್ಯದ ರಾಜಕೀಯ, ಭದ್ರತೆ, ಸಮಾಜಿಕ ಏರಿಳಿತಗಳ ಬಗ್ಗೆ ಬಾಗೂರುನಲ್ಲಿ ಮತ್ತೆ ಭವಿಷ್ಯ ನುಡಿದಿದ್ದಾರೆ.

ಈಗಾಗಲೆ ಸಾಕಷ್ಟು ಉಬ್ಬರವಿಳಿತಗಳನ್ನು ಕಾಣುತ್ತಿರುವ ರಾಜಕೀಯ ಸನ್ನಿವೇಶದಲ್ಲಿ ಸಾಕಷ್ಟು ನಾಟಕೀಯ ಬೆಳವಣಿಗಳಾಗಲಿವೆ, ಅನೇಕ ಬದಲಾವಣೆಗಳಾಗಲಿವೆ ಎಂದು ಹೇಳಿ ಶ್ರೀಗಳು ರಾಜ್ಯ ರಾಜಕೀಯ ಬದಲಾವಣೆಗೆ ಮುನ್ನುಡಿ ಬರೆದಿದ್ದಾರೆ.

ಕೆಲವೇ ತಿಂಗಳಲ್ಲಿ ಪ್ರಕೃತಿ ವಿಕೋಪದಿಂದ ರಾಜ್ಯದಲ್ಲಿ ಭಾರೀ ನಷ್ಟ ಸಂಭವಿಸಲಿದೆ. ನಕ್ಸಲೀಯರ ಹಾವಳಿಯೂ ರಾಜ್ಯದಲ್ಲಿ ಹೆಚ್ಚಾಗಲಿದೆ. ಇಷ್ಟು ಮಾತ್ರವಲ್ಲ ಕರ್ನಾಟಕದಲ್ಲಿ ಉಗ್ರರಿಂದ ದಾಳಿಯಾಗುವ ಸಂಭವನೀಯತೆ ಇದೆ ಮುನ್ನೆಚ್ಚರಿಕೆ ನೀಡಿದ್ದಾರೆ. ಸರಕಾರ ಈಗಲೆ ಎಚ್ಚೆತ್ತುಕೊಳ್ಳುವುದು ಕ್ಷೇಮ.

ಇವೆಲ್ಲ ನಿರೀಕ್ಷಿಸಬಹುದಾದ ಭವಿಷ್ಯಗಳಾದರೆ, ನಿರೀಕ್ಷಿಸದೆ ಇರುವ ಭವಿಷ್ಯವನ್ನೂ ಹೇಳಿದ್ದಾರೆ. ಅದೇನೆಂದರೆ, ಶೋಕೇಸಿನಲ್ಲಿ ಕೂತಿದ್ದ ಮುತ್ತಿನ ಗಿಳಿಯೂ ಮಾತನಾಡಲಿದೆ. ಇದು ಶುಭದ ಸಂಕೇತವಲ್ಲ ಎಂದು ಹೇಳಿ ಕೋಡಿಮಠ ಶ್ರೀಗಳು ಇಡೀ ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+