ಬೆಂಗಳೂರಿನಲ್ಲಿ ಸಿಬಿಐ ಎಫ್ಐಆರ್: ರೆಡ್ಡಿ ಪತ್ನಿ ಅರುಣಾ ಬಂಧನ?

ಇದೀಗ ರೆಡ್ಡಿ ಪತ್ನಿಯ ಮೇಲೆ ಕರ್ನಾಟಕದಲ್ಲಿ ಎಫ್ಐಆರ್ ದಾಖಲಾಗಿರುವುದು ಗಣಿ ದೊರೆಗಳಿಗೆ ನುಂಗಲಾರದ ತುತ್ತಾಗಿದೆ. ಇದರಿಂದ ಲಕ್ಷ್ಮಿ ಅರುಣಾ ಅವರನ್ನು ಬೆಂಗಳೂರು ಸಿಬಿಐ ಅಧಿಕಾರಿಗಳು ವಶಕ್ಕೆ ತೆಗೆದುಕೊಳ್ಳುತ್ತಾರಾ ಎಂಬ ಪ್ರಶ್ನೆ ರಾರಾಜಿಸುತ್ತಿದೆ.
ದಾಖಲಾರ್ಹ ಸಂಗತಿಯೆಂದರೆ ಮಾಜಿ ಸಚಿವ ವಿ. ಮುನಿಯಪ್ಪ ಅವರ ಹೆಸರೂ ಎಫ್ಐಆರ್ ನಲ್ಲಿ ಕಾಣಿಸಿಕೊಂಡಿದೆ. ಎಸ್.ಎಂ.ಕೃಷ್ಣ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಸಚಿವರಾಗಿದ್ದ ಕಾಂಗ್ರೆಸ್ನ ವಿ. ಮುನಿಯಪ್ಪನವರಿಗೆ ಈ ಬಾರಿ ಅಕ್ರಮ ಗಣಿಗಾರಿಕೆಯ ಧೂಳು ಮೆತ್ತಿಕೊಂಡಿರುವುದು ಕಾಂಗ್ರೆಸ್ಗೆ ಮುಜುಗರವನ್ನುಂಟು ಮಾಡಿದೆ.
ಅಕ್ರಮ ಗಣಿಗಾರಿಕೆ, ಅದಿರು ರಫ್ತು, ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ, ಬಳ್ಳಾರಿ ಜಿಲ್ಲೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾನೂನು ಉಲ್ಲಂಘಿಸಿ, ಅರಣ್ಯ ಕಾಯ್ದೆಯನ್ನು ಮೀರಿ ಗಣಿಗಾರಿಕೆ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯದಲ್ಲಿ ಈ ಎಫ್ಐಆರ್ ದಾಖಲಿಸಲಾಗಿದೆ. ರಾಜ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆಯ ಸಂಬಂಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಿಬಿಐನ ಡಿಜಿಪಿ ಹಿತೇಂದ್ರ, 21 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಿ, ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಮಾಜಿ ಸಚಿವ ಜನಾರ್ದನ ರೆಡ್ಡಿ ಹಾಗೂ ಅವರ ಪತ್ನಿ ಲಕ್ಷ್ಮಿ ಅರುಣಾ, ಬಳ್ಳಾರಿಯಲ್ಲಿ ಉಪ ವಲಯ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಮುತ್ತಯ್ಯ, ಮಾಜಿ ಗಣಿ ಸಚಿವ ವಿ.ಮುನಿಯಪ್ಪ, ಗಣಿ ಮತ್ತು ಭೂವಿಜ್ಞ್ಞಾನ ಇಲಾಖೆಯ ನಿರ್ದೇಶಕ ಶಿವಲಿಂಗಮೂರ್ತಿ, ಜನಾದೇವಿ ಮಿನರಲ್ಸ್, ಲಕ್ಷ್ಮಿಅರುಣಾ ಮಿನರಲ್ಸ್, ಈಗಲ್ ಟ್ರೇಡರ್ಸ್ ಅಂಡ್ ಲಾಜಿಸ್ಟಿಕ್ಸ್, ಶಾಂತಾಲಕ್ಷ್ಮಿ ಜಯರಾಮ್, ವಿಜಯ ಮೈನಿಂಗ್ ಆಂಡ್ ಇನ್ಫ್ರಾಸ್ಟ್ರಕ್ಚರ್, ಅಸೋಸಿಯೇಟೆಡ್ ಮೈನಿಂಗ್ ಕಂಪನಿಯ ಹಿಂದಿನ ಮಾಲೀಕರು, ದಿವಾಕರ್ ಮಿನರಲ್ಸ್ ಅಂಡ್ ಜಿಂಟೆಕ್ಸ್, ಬ್ರಹ್ಮಿಣಿ ಇಂಡಸ್ಟ್ರೀಸ್, ಐಎಲ್ಸಿ ಎಕ್ಸ್ಪೋರ್ಟ್ಸ್ ಅಂಡ್ ಟ್ರೇಡಿಂಗ್ ಸೇರಿದಂತೆ 21 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications