ದೊಡ್ಡ ಗೌಡರ ಬಾಯಿಂದ ರಾಜಕೀಯ ನಿವೃತ್ತಿಯ ಮಾತು

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, 40 ವರ್ಷದ ರಾಜಕೀಯ ಜೀವನದಲ್ಲಿ ರೈತರು ಮತ್ತು ಶೋಷಿತರ ಪರ ನಿರಂತರ ಹೋರಾಟ ಮಾಡಿಕೊಂಡು ಬಂದಿದ್ದೇನೆ. ರಾಜ್ಯದಲ್ಲಿ ಸದ್ಯೋಭವಿಷ್ಯತ್ ನಲ್ಲಿ ನಡೆಯುವ ವಿಧಾನಸಭೆ ಸಾರ್ವತ್ರಿಕ ಚುನಾವಣೆ ತಮ್ಮ ಹೋರಾಟದ ಕೊನೆಯ ಘಟ್ಟವಾಗಿದೆ. 224 ಕ್ಷೇತ್ರಗಳಿಗೂ ಖುದ್ದಾಗಿ ನಾನೇ ಪ್ರವಾಸ ಕೈಗೊಂಡು, ಜೆಡಿಎಸ್ನಿಂದ ಸ್ಪರ್ಧಿಸುವ 224 ಅಭ್ಯರ್ಥಿಗಳಿಗೂ ಸ್ವತಃ ನಾನೇ ಬಿ ಫಾರಂ ವಿತರಿಸುವುದಾಗಿ ತಿಳಿಸಿದರು.
ಕೃಷ್ಣ ತುಂಡು ಗುತ್ತಿಗೆ ಪ್ರಕರಣದಲ್ಲಿ ಶಂಕರ ಬಿದರಿ ಅವರ ಮೇಲೆ ತಮಗೇನು ವೈಯಕ್ತಿಕ ದ್ವೇಷವಿಲ್ಲ, ಯಾವುದೇ ಆರೋಪದಲ್ಲಿ ಎಫ್ಐಆರ್ ದಾಖಲಿಸುವಾಗ ಆರೋಪಿಗಳ ಹೆಸರನ್ನು ಕಾಣಿಸಲಾಗುತ್ತದೆ.
ಆದರೆ ಬಿದರಿಯವರು ಈ ಪ್ರಕರಣದಲ್ಲಿ ಗುತ್ತಿಗೆದಾರರು, ಅಧಿಕಾರಿಗಳು ಮತ್ತು ಇತರರು ಎಂದು ಕಾಣಿಸಿರುವುದು ದುರುದ್ಧೇಶಪೂರಕ ಎಂದು ಸ್ಪಷ್ಟವಾಗಿ ಗೋಚರವಾಗುತ್ತದೆ. ಅನುಭವಿ ಅಧಿಕಾರಿ ಎಡವಿರುವ ಬಗ್ಗೆ ತಮ್ಮ ದೂರಿದೆಯೇ ಹೊರತು ವೈಯಕ್ತಿವಾಗಿ ಅಲ್ಲ ಎಂದು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ಲೋಕಾಯುಕ್ತರ ಆಯ್ಕೆ ಸಂಬಂಧ ಎದ್ದಿರುವ ಗೊಂದಲಗಳ ಬಗ್ಗೆ ಪ್ರಶ್ನಿಸಿದಾಗ, ಇಂತಹವರೇ ಲೋಕಾಯುಕ್ತರು ಆಗಬೇಕೆಂಬ ತೀರ್ಮಾನ ತೆಗೆದುಕೊಂಡಾಗ ಈ ರೀತಿಯ ಗೊಂದಲಗಳು ಸಹಜ, ಇದಕ್ಕಾಗಿ ಇರುವ ಸಮಿತಿಯು ಸೂಕ್ತ ಹೆಸರನ್ನು ರಾಜ್ಯಪಾಲರಿಗೆ ಕಳುಹಿಸಿದರೆ, ಅದರಲ್ಲಿ ಒಬ್ಬರ ಆಯ್ಕೆಯಾಗುತ್ತದೆ. ಆದರೆ ಬಿಜೆಪಿ ಸರ್ಕಾರ ಒಬ್ಬರ ಹೆಸರನ್ನೇ ಶಿಫಾರಸ್ಸು ಮಾಡಿ ಕಳುಹಿಸಿರುವುದರಿಂದ ರಾಜ್ಯಪಾಲರು ತಿರಸ್ಕರಿಸಿದ್ದಾರೆ ಎಂದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications