ಬಿಸ್ಕತ್ತು ತಿನ್ನಿಸಿ, ಟ್ಯಾಬ್ಲೆಟ್ಟು ನುಂಗಿಸಿದ ಶ್ರೀನಿಧಿ ಪುಸ್ತಕ

ಯುವಬರಹಗಾರ, ಅಂಕಣಕಾರ ಶ್ರೀನಿಧಿ ಟಿ.ಜಿ.ಯವರ ಈ ಪುಸ್ತಕವನ್ನು ಪ್ರೊ,ಜಿ.ವೆಂಕಟಸುಬ್ಬಯ್ಯ ಹಾಗೂ ಮಠ ಗುರುಪ್ರಸಾದ್ ಬಿಡುಗಡೆ ಮಾಡಿ ಮಾತನಾಡಿದರು. www.ejnana.com ಮತ್ತು 'ಆಕೃತಿ ಪುಸ್ತಕ'ದಿಂದ ಪ್ರಕಟವಾಗಿರುವ ಈ ಪುಸ್ತಕಕ್ಕೆ ಅದರಲ್ಲಿನ ಉಪಯುಕ್ತ ವಿಷಯಗಳಿಗೆ ಮತ್ತು ಸರಳ ಭಾಷೆಯ ಬಳಕೆಗೆ ಅತಿಥಿಗಳಿಂದ, ಹಿರಿಯರಿಂದ ಶಭಾಷ್ಗಿರಿ ದೊರಕಿತು.
ಜೋಶ್ ತುಂಬಿದ ಜೋಶಿ ಭಾಷಣ: ಅಂಕಣಕಾರ ಶ್ರೀವತ್ಸಜೋಶಿಯವರು ಅಮೆರಿಕಾದಲ್ಲೇ ಕುಳಿತು ಈ ಪುಸ್ತಕದ ಬಗ್ಗೆ ಮಾತನಾಡಿದ್ದು, ಅದನ್ನು ಸಭಾಂಗಣದಲ್ಲಿ ಪ್ರಸಾರ ಮಾಡಿದ್ದು ವಿಶೇಷವಾಗಿದ್ದು ಕಾರ್ಯಕ್ರಮಕ್ಕೆ ಒಂದು ತಾಂತ್ರಿಕ ಕಳೆ ತಂದುಕೊಟ್ಟಿತು.
ಬಹುಶಃ ಪ್ರಪ್ರಥಮ ಇ ಭಾಷಣ ಇದೇ ಎನಿಸುತ್ತದೆ. ಭಾಷಣದ ಸಂಪೂರ್ಣ ವಿಡಿಯೋ ಇಲ್ಲಿದೆ ನೋಡಿ
ಭಾಷೆ ಬೆಳೆಯಬೇಕು: ಭಾಷಾತಜ್ಞ ಪ್ರೊ.ಜಿ.ವಿ. ಪುಸ್ತಕದ ಭಾಷೆಯ ಬಗ್ಗೆ ಬಹಳ ಸಂತಸಪಟ್ಟರು. ಪಾರಿಭಾಷಿಕ ಶಬ್ದಗಳ ಭಾರದಿಂದ ನಲುಗದೇ ಎಲ್ಲರಿಗೂ ಸುಲಭವಾಗಿ ಅರ್ಥವಾಗುವಂತಹ ಭಾಷೆ ಮತ್ತು ಪದಗಳನ್ನು ಬಳಸಿ ಬರೆದಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಂಪ್ಯೂಟರ್ ಮುಂತಾದ ತಂತ್ರಜ್ಞಾನ ಸಂಬಂಧಿತ ಪದಗಳನ್ನು ಕನ್ನಡಕ್ಕೆ ಅನುವಾದ ಮಾಡಿ ಆಭಾಸ ಮಾಡುವುದರ ಬದಲು ಹಾಗೆಯೇ ಬಳಸಿದರೆ ಜನಕ್ಕೆ ಅರ್ಥವೂ ಆಗುತ್ತದೆ ಮತ್ತು ಭಾಷೆಯೂ ಬೆಳೆಯುತ್ತದೆ ಎಂದು ಹೇಳಿದರು.
ಶಾಲಾಶಿಕ್ಷಣದ ಪಠ್ಯಕ್ರಮದಲ್ಲಿ ಈ ಪದ್ಧತಿಯನ್ನು ಮೊದಲಿಂದಲೇ ಅಳವಡಿಸಿದ್ದರೆ ಇವತ್ತು ಕನ್ನಡ ಮಾಧ್ಯಮ, ಇಂಗ್ಲೀಷ್ ಮಾಧ್ಯಮ ತಾರತಮ್ಯ ಇರುತ್ತಿರಲಿಲ್ಲ ಎಂದು ಅಭಿಪ್ರಾಯಪಟ್ಟರು.
ತಮಗೆ ಕಂಪ್ಯೂಟರ್ ಬಳಕೆ ಬಗ್ಗೆ ಅಷ್ಟು ತಿಳುವಳಿಕೆ ಇಲ್ಲದಿದ್ದರೂ ಕೂಡ ಈ ಪುಸ್ತಕವನ್ನು ಓದಿದ ಮೇಲೆ ಅದರಲ್ಲಿನ ವಿಚಾರಗಳು ಅರ್ಥವಾದವು, ಆದ್ದರಿಂದ ಇದು ಜನಸಾಮಾನ್ಯರಿಗೆ, ವಿದ್ಯಾರ್ಥಿಗಳಿಗೆ ಬಹಳ ಸಹಾಯವಾಗುತ್ತದೆ ಮತ್ತು ತಂತ್ರಜ್ಞಾನದ ಬಗ್ಗೆ ಕನ್ನಡದಲ್ಲಿ ಬರೆಯುವವರಿಗೆ ಇದು ಮಾದರಿ ಪುಸ್ತಕ ಎಂದರು.
ಸಿನೆಮಾಗೆ ಬರಹಗಾರರು ಬೇಕು ಎಂದ ಮಠ ನಿರ್ದೇಶಕ ಗುರುಪ್ರಸಾದ್ ಭಾಷಣ ಹೇಗಿತ್ತು? ತಿನ್ನಲಾಗದ ಬಿಸ್ಕತ್ತು, ನುಂಗಲಾಗದ ಟ್ಯಾಬ್ಲೆಟ್ಟು ಪುಸ್ತಕದಲ್ಲಿ ಅಂಥದ್ದೇನಿದೆ? ಮುಂದೆ ಓದಿ...
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications