ಸರ್ಕಾರಕ್ಕೆ ಟಾಂಗ್ ಕೊಟ್ಟ ಮೇಯರ್ 'ಮರಾಠಿ' ಮಂದಾ

ಸರ್ಕಾರ ನೀಡಿರುವ ನೋಟೀಸ್ ಗೆ ಉತ್ತರಿಸುವ ಅವಶ್ಯಕತೆಯಿಲ್ಲ. ಬೇಕಾದರೂ ನಗರ ಪಾಲಿಕೆಯನ್ನು ಸೂಪರ್ ಸೀಡ್ ಮಾಡಲಿ ಎಂದು ಮೇಯರ್ ಮಂದಾ ಬಾಳೇಕುಂದ್ರಿ ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ..
ಕನ್ನಡ ವಿರೋಧಿ ಹಣೆಪಟ್ಟಿ ಕಟ್ಟಿಕೊಂಡಿರುವ ಮೇಯರ್ ಮಂದಾ ಬಾಳೇಕುಂದ್ರಿ ಹಾಗೂ ಉಪ ಮೇಯರ್ ರೇಣು ಕಿಲ್ಲೇಕರ್ ಅವರ ಮೇಲೆ ಶೋಕಾಸ್ ನೋಟಿಸ್ ಹೊರಡಿಸಿದ್ದ ಸದಾನಂದ ಗೌಡರ ಸರ್ಕಾರಕ್ಕೆ ಮುಖಭಂಗವಾಗಿದೆ.
16 ಜನ ಪಾಲಿಕೆ ಸದಸ್ಯರನ್ನು ಕರೆದುಕೊಂಡು ಮಾಜಿ ಮೇಯರ್ ಎನ್ ಬಿ ನಿರ್ವಾಣಿ ನೇರವಾಗಿ ಸದಾನಂದ ಗೌಡರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳನ್ನು ಸಲ್ಲಿಸಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆಯ ಎರಡು ಬಣಗಳು ಕೂಡಾ ಮೇಯರ್ ಮಂದಾ ಹಾಗೂ ಎಂಇಎಸ್ ಬೆಂಬಲಿತ ಪಾಲಿಕೆ ಸದಸ್ಯರ ಸದಸ್ಯತ್ವವನ್ನು ವಜಾಗೊಳಿಸುವಂತೆ ಸದಾನಂದ ಗೌಡರನ್ನು ಆಗ್ರಹಿಸಿದ್ದಾರೆ.












Click it and Unblock the Notifications