ಬೇಲ್ ಮಂಜೂರು:ಯಡಿಯೂರಪ್ಪ, ಶೆಟ್ಟಿ ಜೈಲು ವನವಾಸ ಅಂತ್ಯ

ರಾಚೇನಹಳ್ಳಿ ಹಾಗೂ ಉತ್ತರಹಳ್ಳಿ ಜಮೀನು ಜಮೀನು ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿರಾಜಿನ್ ಬಾಷಾ ಸಲ್ಲಿಸಿದ್ದ 3ನೇ ಖಾಸಗಿ ದೂರಿಗೆ ಸಂಬಂಧಿಸಿದ ಜಾಮೀನು ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಬಿ.ವಿ. ಪಿಂಟೋ, ಯಡಿಯೂರಪ್ಪ ಹಾಗೂ ಕೃಷ್ಣಯ್ಯ ಶೆಟ್ಟಿಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದ್ದರು. ಇದರಿಂದಾಗಿ ಯಡಿಯೂರಪ್ಪ ಹಾಗೂ ಕೃಷ್ಣಯ್ಯ ಶೆಟ್ಟಿಯವರಿಗೆ ಜೈಲಿನಿಂದ ಮುಕ್ತಿ ದೊರೆತಿದೆ.
ಇನ್ನೊಂದೆಡೆ ಯಡಿಯೂರಪ್ಪರ ವಿರುದ್ಧ ಸಿರಾಜಿನ್ ಬಾಷಾ ಸಲ್ಲಿಸಿದ 1,4 ಮತ್ತು 5ನೆ ಖಾಸಗಿ ದೂರಿಗೆ ಸಂಬಂಧಿಸಿದ ಜಾಮೀನು ಅರ್ಜಿಯ ವಿಚಾರಣೆಯೂ ಹೈಕೋರ್ಟ್ನ ಏಕ ಸದಸ್ಯ ಪೀಠದಲ್ಲಿ ನಡೆಯುತ್ತಿದೆ.












Click it and Unblock the Notifications