ಕರ್ನಾಟಕ ಕಾಂಗ್ರೆಸ್ ಆಸ್ಪತ್ರೆಗೆ ಡಾ.ಕೃಷ್ಣ ನೇಮಕ?

ತೀವ್ರ ನಿಗಾ ಘಟಕದಲ್ಲಿರುವ ಪಕ್ಷವನ್ನು ಕಡೆಯಪಕ್ಷ ಜನರಲ್ ವಾರ್ಡ್ ಗೆ ಸ್ಥಳಾಂತರಿಸ ಬೇಕಾದರೆ ಅದು ಎಸ್ ಎಮ್ ಕೃಷ್ಣ ಅವರಿಂದ ಮಾತ್ರ ಸಾಧ್ಯ ಎನ್ನುವ ವಿಶ್ವಾಸ ರಾಜ್ಯದ ಬಹುಪಾಲು ಕಾಂಗ್ರೆಸ್ ಮುಖಂಡರಲ್ಲಿ ಕಾಣಬರುತ್ತಿದೆ.
ಇದಕ್ಕೆ ಪೂರಕವಾಗಿ ಭಾನುವಾರ (ನ 6) ದಂದು ನಡೆದ ಪಕ್ಷದ ಚಿಂತನಾಸಭೆಯಲ್ಲಿ ಎಸ್ ಎಂ ಕೃಷ್ಣ ಅವರಿಂದ ಹೊರಬಿದ್ದ ಹೇಳಿಕೆ " ಹೈಕಮಾಂಡ್ ನೀಡುವ ಯಾವುದೇ ಜವಾಬ್ದಾರಿಗೆ ನಾನು ಸಿದ್ದ. ರಾಜ್ಯದಲ್ಲಿ ಪಕ್ಷ ಸಂಘಟನೆ, ಬಲವರ್ಧನೆಗೆ ಸೋನಿಯಾ ಮೇಡಂ ಅವರ ನಿರ್ಣಯ ಅಂತಿಮ. ರಾಷ್ಟ್ರ ರಾಜಕಾರಣದಲ್ಲಿ ಬ್ಯೂಸಿ ಆಗಿದ್ದರಿಂದ, ಇಲ್ಲಿನ ವಿದ್ಯಮಾನಗಳ ಕಡೆ ಗಮನಹರಿಸಲಾಗಲಿಲ್ಲ. ಇನ್ನು ಮುಂದೆ ಪಕ್ಷ ಬಲವರ್ಧನೆಗೆ ನನ್ನ ಸಮಯವನ್ನು ಮೀಸಲಿಡುತ್ತೇನೆ. ರಾಜ್ಯದಲ್ಲಿ ಪಕ್ಷ ಮತ್ತೆ ತನ್ನ ಭದ್ರ ನೆಲೆ ಹೊಂದಲು ಶ್ರಮಿಸುತ್ತೇನೆ".
ಒಂದಿಲ್ಲೊಂದು ಹಗರಣಗಳ ಸುಳಿಯಲ್ಲಿ ಸಿಲುಕಿರುವ ಆಡಳಿತಾರೂಢ ಬಿಜೆಪಿಯ ಭ್ರಷ್ಟಾಚಾರವನ್ನು ಜನತಾ ನ್ಯಾಯಾಲಯಕ್ಕೆ ಕೊಂಡೊಯ್ದು ಅದರ ಲಾಭ ಪಡೆಯಲು ಕಾಂಗ್ರೆಸ್ ವಿಫಲವಾಗುತ್ತಿರುವುದು ಸ್ಪಷ್ಟ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಗ್ರಾಮ ಪಂಚಾಯಿತಿ ಚುನಾವಣೆಯಿಂದ ಹಿಡಿದು ನಡೆದ ಯಾವುದೇ ಚುನಾವಣೆಯಲ್ಲಿ ಪಕ್ಷ ಗೆಲುವು ಸಾಧಿಸುವುದು ಇರಲಿ ಎಷ್ಟೋ ಬಾರಿ ಠೇವಣಿ ಕಳೆದುಕೊಂಡು ಮುಖಭಂಗ ಅನುಭವಿಸಿದೆ.
ಸಾರ್ವಜನಿಕರಲ್ಲಿ ಜೆಡಿಎಸ್ ವಿರೋಧ ಪಕ್ಷ ಎನ್ನುವ ಭಾವನೆ ಮೂಡಿ ಬರುತ್ತಿರುವ ಈ ಸಮಯದಲ್ಲಿ, ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಪಕ್ಷ ಮತ್ತಷ್ಟು ಮಣ್ಣು ಮುಕ್ಕುವುದು ನಿಸ್ಸಂಶಯ ಎಂದರಿತ ಹೈಕಮಾಂಡ್ ಈ ಸಂಬಂಧ ಬಿರುಸಿನ ಚಟುವಟಿಕೆಯಲ್ಲಿ ತೊಡಗಿದೆ ಎನ್ನಲಾಗಿದೆ.
ರಾಜ್ಯ ರಾಜಕೀಯದಲ್ಲಿ ನಡೆಯುವ ಮತ್ತೊಂದು ಪ್ರಮುಖ ಅಂಶವೇನಂದರೆ 'ಜಾತಿ ಲೆಕ್ಕಾಚಾರ'. ಈ ಲೆಕ್ಕಾಚಾರದಲ್ಲಿ ಎರಡನೇ ಸ್ಥಾನ ಒಕ್ಕಲಿಗ ಸಮುದಾಯಕ್ಕೆ. ಲಿಂಗಾಯಿತ ಸಮುದಾಯದಲ್ಲಿ ಪಕ್ಷವನ್ನು ಸಂಘಟಿಸುವ ಸೂಕ್ತ ಆಯ್ಕೆ ಹೈಕಮಾಂಡ್ ಗೆ ಇಲ್ಲದಿರುವುದರಿಂದ ಒಕ್ಕಲಿಗ ಸಮುದಾಯಕ್ಕೆ ಸೇರಿದ ಎಸ್ ಎಂ ಕೃಷ್ಣ ಅವರೇ ಸೂಕ್ತ ಎನ್ನುವ ಅಂತಿಮ ನಿರ್ಧಾರಕ್ಕೆ ಸೋನಿಯಾಜಿ ಬಂದಿದ್ದಾರೆಂದು ನಂಬಲರ್ಹ ಮೂಲಗಳಿಂದ ವರದಿಯಾಗಿದೆ.
ಒಟ್ಟಿನಲ್ಲಿ ಸಂಧ್ಯಾಕಾಲದಲ್ಲಿರುವ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಎಸ್ ಎಂ ಕೃಷ್ಣ ಪುನಃ ಟಾನಿಕ್ ನೀಡಬೇಕು ಎಂದು ಬಯಸುತ್ತಿದ್ದಾನೆ ಪಕ್ಷದ ಕಾರ್ಯಕರ್ತ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications