ಕರ್ನಾಟಕ ಕಾಂಗ್ರೆಸ್ ಆಸ್ಪತ್ರೆಗೆ ಡಾ.ಕೃಷ್ಣ ನೇಮಕ?

ತೀವ್ರ ನಿಗಾ ಘಟಕದಲ್ಲಿರುವ ಪಕ್ಷವನ್ನು ಕಡೆಯಪಕ್ಷ ಜನರಲ್ ವಾರ್ಡ್ ಗೆ ಸ್ಥಳಾಂತರಿಸ ಬೇಕಾದರೆ ಅದು ಎಸ್ ಎಮ್ ಕೃಷ್ಣ ಅವರಿಂದ ಮಾತ್ರ ಸಾಧ್ಯ ಎನ್ನುವ ವಿಶ್ವಾಸ ರಾಜ್ಯದ ಬಹುಪಾಲು ಕಾಂಗ್ರೆಸ್ ಮುಖಂಡರಲ್ಲಿ ಕಾಣಬರುತ್ತಿದೆ.
ಇದಕ್ಕೆ ಪೂರಕವಾಗಿ ಭಾನುವಾರ (ನ 6) ದಂದು ನಡೆದ ಪಕ್ಷದ ಚಿಂತನಾಸಭೆಯಲ್ಲಿ ಎಸ್ ಎಂ ಕೃಷ್ಣ ಅವರಿಂದ ಹೊರಬಿದ್ದ ಹೇಳಿಕೆ " ಹೈಕಮಾಂಡ್ ನೀಡುವ ಯಾವುದೇ ಜವಾಬ್ದಾರಿಗೆ ನಾನು ಸಿದ್ದ. ರಾಜ್ಯದಲ್ಲಿ ಪಕ್ಷ ಸಂಘಟನೆ, ಬಲವರ್ಧನೆಗೆ ಸೋನಿಯಾ ಮೇಡಂ ಅವರ ನಿರ್ಣಯ ಅಂತಿಮ. ರಾಷ್ಟ್ರ ರಾಜಕಾರಣದಲ್ಲಿ ಬ್ಯೂಸಿ ಆಗಿದ್ದರಿಂದ, ಇಲ್ಲಿನ ವಿದ್ಯಮಾನಗಳ ಕಡೆ ಗಮನಹರಿಸಲಾಗಲಿಲ್ಲ. ಇನ್ನು ಮುಂದೆ ಪಕ್ಷ ಬಲವರ್ಧನೆಗೆ ನನ್ನ ಸಮಯವನ್ನು ಮೀಸಲಿಡುತ್ತೇನೆ. ರಾಜ್ಯದಲ್ಲಿ ಪಕ್ಷ ಮತ್ತೆ ತನ್ನ ಭದ್ರ ನೆಲೆ ಹೊಂದಲು ಶ್ರಮಿಸುತ್ತೇನೆ".
ಒಂದಿಲ್ಲೊಂದು ಹಗರಣಗಳ ಸುಳಿಯಲ್ಲಿ ಸಿಲುಕಿರುವ ಆಡಳಿತಾರೂಢ ಬಿಜೆಪಿಯ ಭ್ರಷ್ಟಾಚಾರವನ್ನು ಜನತಾ ನ್ಯಾಯಾಲಯಕ್ಕೆ ಕೊಂಡೊಯ್ದು ಅದರ ಲಾಭ ಪಡೆಯಲು ಕಾಂಗ್ರೆಸ್ ವಿಫಲವಾಗುತ್ತಿರುವುದು ಸ್ಪಷ್ಟ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಗ್ರಾಮ ಪಂಚಾಯಿತಿ ಚುನಾವಣೆಯಿಂದ ಹಿಡಿದು ನಡೆದ ಯಾವುದೇ ಚುನಾವಣೆಯಲ್ಲಿ ಪಕ್ಷ ಗೆಲುವು ಸಾಧಿಸುವುದು ಇರಲಿ ಎಷ್ಟೋ ಬಾರಿ ಠೇವಣಿ ಕಳೆದುಕೊಂಡು ಮುಖಭಂಗ ಅನುಭವಿಸಿದೆ.
ಸಾರ್ವಜನಿಕರಲ್ಲಿ ಜೆಡಿಎಸ್ ವಿರೋಧ ಪಕ್ಷ ಎನ್ನುವ ಭಾವನೆ ಮೂಡಿ ಬರುತ್ತಿರುವ ಈ ಸಮಯದಲ್ಲಿ, ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಪಕ್ಷ ಮತ್ತಷ್ಟು ಮಣ್ಣು ಮುಕ್ಕುವುದು ನಿಸ್ಸಂಶಯ ಎಂದರಿತ ಹೈಕಮಾಂಡ್ ಈ ಸಂಬಂಧ ಬಿರುಸಿನ ಚಟುವಟಿಕೆಯಲ್ಲಿ ತೊಡಗಿದೆ ಎನ್ನಲಾಗಿದೆ.
ರಾಜ್ಯ ರಾಜಕೀಯದಲ್ಲಿ ನಡೆಯುವ ಮತ್ತೊಂದು ಪ್ರಮುಖ ಅಂಶವೇನಂದರೆ 'ಜಾತಿ ಲೆಕ್ಕಾಚಾರ'. ಈ ಲೆಕ್ಕಾಚಾರದಲ್ಲಿ ಎರಡನೇ ಸ್ಥಾನ ಒಕ್ಕಲಿಗ ಸಮುದಾಯಕ್ಕೆ. ಲಿಂಗಾಯಿತ ಸಮುದಾಯದಲ್ಲಿ ಪಕ್ಷವನ್ನು ಸಂಘಟಿಸುವ ಸೂಕ್ತ ಆಯ್ಕೆ ಹೈಕಮಾಂಡ್ ಗೆ ಇಲ್ಲದಿರುವುದರಿಂದ ಒಕ್ಕಲಿಗ ಸಮುದಾಯಕ್ಕೆ ಸೇರಿದ ಎಸ್ ಎಂ ಕೃಷ್ಣ ಅವರೇ ಸೂಕ್ತ ಎನ್ನುವ ಅಂತಿಮ ನಿರ್ಧಾರಕ್ಕೆ ಸೋನಿಯಾಜಿ ಬಂದಿದ್ದಾರೆಂದು ನಂಬಲರ್ಹ ಮೂಲಗಳಿಂದ ವರದಿಯಾಗಿದೆ.
ಒಟ್ಟಿನಲ್ಲಿ ಸಂಧ್ಯಾಕಾಲದಲ್ಲಿರುವ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಎಸ್ ಎಂ ಕೃಷ್ಣ ಪುನಃ ಟಾನಿಕ್ ನೀಡಬೇಕು ಎಂದು ಬಯಸುತ್ತಿದ್ದಾನೆ ಪಕ್ಷದ ಕಾರ್ಯಕರ್ತ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications