Get Updates
Get notified of breaking news, exclusive insights, and must-see stories!

ಗಂಗಾವತಿ ಸಮ್ಮೇಳನಕ್ಕೆ ಸಿಪಿ ಕೃಷ್ಣಕುಮಾರ್ ಅಧ್ಯಕ್ಷ

78th KSS president CP Krishnakumar
ಕೊಪ್ಪಳ, ನ.9 : ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಡಿ. 9 ರಿಂದ 11 ರವರೆಗೂ ನಡೆಯಲಿರುವ 78ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಸಾಹಿತಿ ಸಿ.ಪಿ. ಕೃಷ್ಣಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಪ್ರಕಟಿಸಿದ್ದಾರೆ.

ಸಿಪಿಕೆ ಎಂದೇ ಜನಜನಿತರಾಗಿರುವ ನೃಪತುಂಗ ಪ್ರಶಸ್ತಿ ವಿಜೇತ, ಮೈಸೂರು ಮೂಲದ ಸಾಹಿತಿ, ವಿಮರ್ಶಕ ಸಿ.ಪಿ. ಕೃಷ್ಣಕುಮಾರ್ ಅವರನ್ನು ಸಮ್ಮೇಳನದ ಅಧ್ಯಕ್ಷರಾಗಿ ನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಸಾಹಿತಿ ಎಂಎಂ ಕಲ್ಬುರ್ಗಿ ಹಾಗೂ ಉಷಾ ಪಿ ರೈ ಅವರ ಹೆಸರು ಮುಂಚೂಣಿಯಲ್ಲಿತ್ತು. ಇವರ ಜೊತೆಗೆ ಜ್ಞಾನಪೀಠ ಪ್ರಶಸ್ತಿ ವಿಜೇತರಾದ ಗಿರೀಶ್ ಕಾರ್ನಡ್, ಚಂದ್ರಶೇಖರ ಕಂಬಾರ, ಡಾ. ಚಿದಾನಂದ ಮೂರ್ತಿ, ಹಂಪಾ ನಾಗರಾಜಯ್ಯ ಹಾಗೂ ಕೋ. ಚನ್ನಬಸಪ್ಪ ಸೇರಿದಂತೆ ಸುಮಾರು 15 ಜನ ಸಾಹಿತಿಗಳ ಹೆಸರನ್ನು ಪರಿಗಣಿಸಲಾಗಿತ್ತು ಎಂದು ನಲ್ಲೂರು ಪ್ರಸಾದ್ ಅವರು ಹೇಳಿದ್ದಾರೆ.

ಕಲ್ಯಾಣ ಕರ್ನಾಟಕದ ಭಾಗಕ್ಕೆ ಅವಕಾಶ ಒದಗಿಸಿಕೊಡುವ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಗೆ ಈ ಬಾರಿ ಸಮ್ಮೇಳನ ನೀಡುವ ಅವಕಾಶ ದೊರೆತಿದೆ. 1992 ರಲ್ಲಿ ಸಿಂಪಿ ಲಿಂಗಣ್ಣ ಅವರ ಅಧ್ಯಕ್ಷತೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿತ್ತು. ನಂತರ ಕೊಪ್ಪಳ ಜಿಲ್ಲಾಕೇಂದ್ರವಾಗಿ ಹೈದರಾಬಾದ್ ಕರ್ನಾಟಕದಲ್ಲಿ ಕನ್ನಡವನ್ನು ಉಳಿಸಿ ಬೆಳಸುವ ಪ್ರಮುಖ ವೇದಿಕೆಯಾಗಿ ಬೆಳೆದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+