ಶನಿವಾರ ನ. 12 ಅಪ್ಪನ ದಿನ ಮಾವನ ದಿನ!

ತಂದೆಯ ಋಣ ತೀರಸಲಾರದ್ದು. ಆದರೂ ಮಕ್ಕಳ ಕೃತಜ್ಞತೆಯನ್ನು ಈ ಎರಡು ಆಡಿಯೋ ಮತ್ತು ವಿಡಿಯೋ ರೂಪದಲ್ಲಿ ತೀರಿಸುತ್ತಿರುವವರು ವಕೀಲೆ, ಲೇಖಕಿ ಅಂಜಲಿ ರಾಮಣ್ಣ. ಸೋಮಶೇಖರ ರಾವ್ ಅವರು ಅಂಜಲಿಯವರ ಮಾವ ಮತ್ತು ರಾಮಣ್ಣ ಅವರು ಅಂಜಲಿ ಅವರ ತಂದೆ. ಇವರಿಬ್ಬರ ಬಗ್ಗೆ ಆಸ್ಥೆಯಿಂದ, ಪ್ರೀತಿಯಿಂದ, ಧನ್ಯತೆಯಿಂದ ವೀಡಿಯೋ ಮತ್ತು ಆಡಿಯೋ CDಗಳನ್ನು ತಂದಿರುವುದಾಗಿ ಅಂಜಲಿ ಹೇಳಿದ್ದಾರೆ.
ಕಾರ್ಯಕ್ರಮದ ವಿವರ
ದಿನಾಂಕ : ನವೆಂಬರ್ 12, 2011, ಶನಿವಾರ
ಸಮಯ : ಬೆಳಿಗ್ಗೆ 10.15
ಸ್ಥಳ : ಮಾನಂದಿ ಸಂಸ್ಕೃತಿ ಸದನ
ನಂ.317, 9ನೇ ಮುಖ್ಯ ರಸ್ತೆ, 5ನೇ ಬ್ಲಾಕ್ ಜಯನಗರ, ಬೆಂಗಳೂರು-560 041
(ಫ್ಲೋಟಿಂಗ್ ವಾಲ್ಸ್ ಎದುರು, ಆದಿಕೇಶ್ವರ ಮಾರ್ಕೆಟಿಂಗ್ ಪಕ್ಕ)
ವೇದಿಕೆಯ ಮೇಲೆ : ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ ಮತ್ತು ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ ಮತ್ತು ಖ್ಯಾತ ರಂಗಕರ್ಮಿ, ನಿರ್ದೇಶಕಿ ಡಾ.ಗೀತಾ ರಾಮಾನುಜಂ ಅವರು ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ.
'ಕಾಡು ಕುದುರೆ ಓಡಿ ಬಂದಿತ್ತ' ಹಾಡಿಗಾಗಿ ರಾಷ್ಟ್ರಪ್ರಶಸ್ತಿ ಪಡೆದಿದ್ದ ಗಾಯಕ ಶಿವಮೊಗ್ಗ ಸುಬ್ಬಣ್ಣ ಮತ್ತು ತಂಡದವರು ಸುಗಮ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಕಾರ್ಯಕ್ರಮ ಶುರುವಾಗುವುದು ಬೆಳಿಗ್ಗೆ 10.45 ಕ್ಕಾದರೂ ಅರ್ಧ ಗಂಟೆ ಮುಂಚೆ ಆಗಮಿಸಬೇಕಾಗಿ ಅಂಜಲಿ ರಾಮಣ್ಣ ಮತ್ತು ಅವರ ಪತಿ ನ್ಯಾಯಾಧೀಶ ಎಚ್.ಎಸ್. ವಿವೇಕಾನಂದ ಅವರು ಸ್ನೇಹಿತರನ್ನು ಕೋರಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications