ಗುಡಿಯಲ್ಲಿ ಗೋಮಾಂಸ : ಕೋಲಾರದಲ್ಲಿ ಕೋಮು ಕಲಹ

ಅಮ್ಮವಾರಿ ಪೇಟೆಯಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಗೋಮಾಂಸದ ಚೂರುಗಳನ್ನು ಹಾಕಿದ್ದು ಬೆಳಿಗ್ಗೆ ದೇವಸ್ಥಾನಕ್ಕೆ ಬಂದಿದ್ದ ಭಕ್ತಾದಿಗಳ ಗಮನಕ್ಕೆ ಬಂದಿದೆ. ಈ ಸುದ್ದಿಯನ್ನು ಹಿಂದೂ ಪರ ಸಂಘಟನೆಗಳ ಮುಖಂಡರಿಗೆ ಮುಟ್ಟಿಸಲಾಗಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಹಿಂದೂ ಪರ ಸಂಘಟನೆಗಳು ನಗರದಾದ್ಯಂತ ಮೆರವಣಿಗೆ ನಡೆಸಿ ಕಿಡಿಗೇಡಿಗಳನ್ನು ಬಂಧಿಸಲು ಒತ್ತಾಯಿಸಿದರು.
ಮೆರವಣಿಗೆ ಮುಸ್ಲಿಂ ಬಂಧುಗಳೇ ಹೆಚ್ಚಾಗಿರುವ ಗಡಿಯಾರ ಗೋಪುರ (ಕ್ಲಾಕ್ ಟವರ್) ಪ್ರದೇಶಕ್ಕೆ ಬಂದಾಗ ವಹಿವಾಟು ಸ್ಥಗಿತಗೊಳಿಸಲು ವ್ಯಾಪಾರಿಗಳಿಗೆ ತಾಕೀತು ಮಾಡಲಾಗಿದೆ. ಇದನ್ನು ಮುಸ್ಲಿಂ ವ್ಯಾಪಾರಿಗಳು ವಿರೋಧಿಸಿದ್ದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿ, ಎರಡು ಪಂಗಡಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಪೋಕರಿಗಳನ್ನು ಚೆದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು.
ಈ ಸಂದರ್ಭದಲ್ಲಿ ಪೊಲೀಸರಿಗೂ ಕಲ್ಲೇಟು ಬಿದ್ದು ಓರ್ವ ಪೇದೆಗೆ ಗಾಯವಾಗಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ತಡೆಯಲು ಜಿಲಾಧಿಕಾರಿ ಮನೋಜ್ ಕುಮಾರ್ ಮೀನಾ ಸ್ಥಳಕ್ಕೆ ಅಗಮಿಸಿ ಎರಡು ಕಡೆಯವರನ್ನು ಚೆದರಿಸಲು ಪೊಲೀಸರಿಗೆ ಸಹಕಾರಿಯಾಗಿ ನಿಂತರು. ರಾಜಕೀಯ ಪಕ್ಷಗಳ ಮುಖಂಡರ ಸಲಹೆಯಂತೆ ಮುಸ್ಲಿಂ ಸಂಘಟನೆಗಳಾದ ಅಂಜುಮನ್ ಹಾಗೂ ವಕ್ಫ್ ಮುಖಂಡರು ದೇವಾಲಯಕ್ಕೆ ಆಗಮಿಸಿ ಆವರಣದಲ್ಲಿ ನಡೆಯುತ್ತಿದ್ದ ಸ್ವಚ್ಛತಾ ಕಾರ್ಯಕ್ಕೆ ಮುಂದಾದರು.
ಈ ಬಗ್ಗೆ ಹಿಂದೂ ಪರ ಸಂಘಟನೆ ಮುಖಂಡರು ಅವಕಾಶ ನೀಡಲಿಲ್ಲ. ಮದ್ಯ ಪ್ರವೇಶಿಸಿ ಜಿಲ್ಲಾಧಿಕಾರಿ ಮೀನಾರವರು ಎರಡು ಕಡೆಯ ಮುಖಂಡರ ಮನಒಲಿಸಲು ಯಶಸ್ವಿಯಾದರು. ಕೇಂದ್ರ ವಲಯ ಐಜಿಪಿ ಮಾಲಿನಿ ಕೃಷ್ಣಮೂರ್ತಿ ಅಗಮಿಸಿ ಪೊಲೀಸರ ನಿಷ್ಕ್ರಿಯತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಅಪರಾಧ ಪ್ರಕ್ರಿಯಾ ಸಂಹಿತೆ(ಸಿಆರ್ಪಿಸಿ)ಯ ಕಾಯ್ದೆಯ ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಗರದಲ್ಲಿ ಕುದಿಮೌನ ಮನೆಮಾಡಿದೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications