ಬಿಜೆಪಿಗೆ ಗುಡ್ ಬೈ ಹೇಳಿದ ಬಿ ಶ್ರೀರಾಮುಲು

ಇಂದು (ನ 9) ಮಧ್ಯಾಹ್ನ 1.30 ಕ್ಕೆ ಶ್ರೀರಾಮುಲು ನಾಮಪತ್ರ ಸಲ್ಲಿಸಲಿದ್ದಾರೆ. ಬೆಂಬಲಿಗರು ಮತ್ತು ಆಪ್ತರ ಸಲಹೆಯಂತೆ ಈ ನಿರ್ಧಾರಕ್ಕೆ ಬಂದಿದ್ದೇನೆ. ನಾನು ರಾಜಕೀಯವಾಗಿ ಈ ಮಟ್ಟಕ್ಕೆ ಬೆಳೆಯಲು ಜನಾರ್ಧನ ರೆಡ್ಡಿ ಕಾರಣ. ಜನತೆ ನನ್ನನ್ನು ಕೈಬಿಡುವುದಿಲ್ಲ, ಬಳ್ಳಾರಿ ಜನತೆ ನನ್ನನ್ನು ಭಾರೀ ಬಹುಮತದಿಂದ ಆರಿಸುತ್ತಾರೆ ಎನ್ನುವ ನಂಬಿಕೆ ಇದೆ ಎಂದು ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.
ನಾಮಪತ್ರ ಸಲ್ಲಿಕೆಯ ಮುನ್ನ ಮೆರವಣಿಗೆ ನಡೆಸಲಿರುವ ಶ್ರೀರಾಮುಲು ನಗರದ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಕೌಲ್ ಬಜಾರ್ ದರ್ಗಾಕ್ಕೆ ಭೇಟಿ ನೀಡಿದ ಶ್ರೀರಾಮುಲು, ಜನಾರ್ಧನ ರೆಡ್ಡಿ ಇಲ್ಲದಿರುವುದು ಬೇಸರ ತಂದಿದೆ ಎಂದಿದ್ದಾರೆ. ಈ ಮಧ್ಯೆ ಬಳ್ಳಾರಿ ನಗರ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಸೋಮಶೇಖರ ರೆಡ್ಡಿ ಶ್ರೀರಾಮುಲು ವಿರುದ್ದವಾಗಿ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಬಾರದೆಂದು ಮನವಿ ಮಾಡಿದ್ದಾರೆ.












Click it and Unblock the Notifications