ಈಶ್ವರಪ್ಪನ ಸೀಟು ಬೇಡ, ಹೊಸ ಪಕ್ಷ ಇಲ್ಲ: ಯಡಿಯೂರಪ್ಪ

ಜೈಲಿನಿಂದ ಹೊರಬಿದ್ದ ಮೇಲೆ ನಿಗದಿಯಂತೆ ರೇಸ್ ಕೋರ್ಸ್ ರಸ್ತೆ ನಿವಾಸದಲ್ಲಿ ಬೆಂಬಲಿಗರೊಂದಿಗೆ ಸಣ್ಣ ಸಭೆ ನಡೆಸಿದ್ದಾರೆ. ಬುಧವಾರ ದೆಹಲಿಯಿಂದ ಬೆಂಗಳೂರಿಗೆ ಬಂದ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರನ್ನು ಭೇಟಿ ಮಾಡಿ ಅವರಿಗೆ ಶುಭ ಹಾರೈಸಿ ಕಳಿಸಿದ್ದಾರೆ.
ನಂತರ ಬೆಂಬಲಿಗರೊಂದಿಗೆ ಸಿದ್ಧಗಂಗಾ ಮಠಕ್ಕೆ ತೆರಳಿ ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದ ಪಡೆದ ಯಡಿಯೂರಪ್ಪ ಅವರು ರಾಜ್ಯದ ಉದ್ದಗಲಕ್ಕೂ ಪ್ರವಾಸ ಹೊರಟಿದ್ದಾರೆ.
ಹೊಸ ಪಕ್ಷ ಇಲ್ಲ: 'ನಾನು ಹೊಸ ಪಕ್ಷ ಕಟ್ಟುತ್ತಿಲ್ಲ ಅಥವಾ ರಾಜ್ಯಾಧ್ಯಕ್ಷರ ಹುದ್ದೆ ಆಕಾಂಕ್ಷಿಯಾಗಿಲ್ಲ. ಪಕ್ಷ ಸಂಘಟನೆ ನನ್ನ ಗುರಿ. ಜೈಲಿನಲ್ಲಿ ಸಾಕಷ್ಟು ಚಿಂತನೆ ನಡೆಸಿದ್ದೇನೆ ಅದನ್ನು ಕಾರ್ಯಗತ ಮಾಡಬೇಕು. ರಾಜ್ಯದ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಕೈಗೊಂಡ ಯೋಜನೆಗಳಿಗೆ ಕಲ್ಲು ಹಾಕಿದವರಿಗೆ ಇನ್ನು ಉಳಿಗಾಲವಿಲ್ಲ' ಎಂದು ಯಡಿಯೂರಪ್ಪ ಗುಡುಗಿದರು.
ಆದರೆ, ಬಳ್ಳಾರಿ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲು ವಿರುದ್ಧ ನಿಲ್ಲುವ ಬಿಜೆಪಿ ಅಭ್ಯರ್ಥಿಯನ್ನು ಯಡಿಯೂರಪ್ಪ ಬೆಂಬಲಿಸುತ್ತಾರಾ? ಅಥವಾ ತಟಸ್ಥವಾಗಿ ಉಳಿದು ಬಿಜೆಪಿ vs ರೆಡ್ಡಿ ಬಣದ ಯುದ್ಧ ನೋಡುತ್ತಾ ಮಜಾ ತೆಗೆದುಕೊಳ್ಳುತ್ತಾರಾ? ಕಾದು ನೋಡಬೇಕಿದೆ.












Click it and Unblock the Notifications