ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರೀರಾಮನಿಗೇ ನಮ್ಮ ಅಖಂಡ ನಿಷ್ಠೆ: ಪಕ್ಷೇತರ ಶಾಸಕ ಗೂಳಿಹಟ್ಟಿ

By Srinath
|
Google Oneindia Kannada News

independents-mlas-support-sreeramulu-goolihatti-shekhar
ಬಳ್ಳಾರಿ, ನ. 10: ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಶ್ರೀರಾಮುಲುಗೇ ತಮ್ಮಅಖಂಡ ನಿಷ್ಠೆ ಎಂದು ರಾಜ್ಯ ಪಕ್ಷೇತರ ಶಾಸಕರ ಪರ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಘೋಷಿಸಿದ್ದಾರೆ. ಶ್ರೀರಾಮುಲು ಪರ ಪ್ರಚಾರ ಮಾಡುವುದಾಗಿ ಹೇಳಿದ ಅವರು, ಇತರ ಪಕ್ಷೇತರ ಶಾಸಕರು ಕೂಡ ಪ್ರಚಾರಕ್ಕೆ ಬರಲಿದ್ದಾರೆ ಎಂದು ಹೇಳಿದರು.

ಬುಧವಾರ ಬಳ್ಳಾರಿಯಲ್ಲಿ ಮಾಜಿ ಸಚಿವ ಶ್ರೀರಾಮುಲು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೂಳಿಹಟ್ಟಿ, ಶ್ರೀರಾಮುಲು ಮತ್ತು ಜನಾರ್ದನರೆಡ್ಡಿ ಅವರ ಮುಖ ನೋಡಿ ಜನ ಬಿಜೆಪಿಗೆ ಮತ ಹಾಕಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಪರಿಶಿಷ್ಟ ಮುಖಂಡರನ್ನು ಒಂದಲ್ಲೊಂದು ರೀತಿಯಲ್ಲಿ ತುಳಿಯುವ ಪ್ರಯತ್ನ ಮಾಡುತ್ತಿದೆ ಎಂದು ಗುಡುಗಿದರು.

ಆದರೆ ಪಕ್ಷವು ರೆಡ್ಡಿ ಸೋದರರನ್ನೇ ಕಡೆಗಣಿಸಿದ್ದು ಸರಿಯಲ್ಲ. ಬಿಜೆಪಿ ಸರ್ಕಾರ ಇದಕ್ಕೆ ತಕ್ಕ ಪ್ರತಿಪಲ ಅನುಭವಿಸಲಿದೆ ಎಂದು ಎಚ್ಚರಿಕೆ ನೀಡಿದ ಗೂಳಿಹಟ್ಟಿ ಶೇಖರ್‌, ಈ ಉಪಚುನಾವಣೆ ಮೂಲಕ ಕೆಳ ವರ್ಗದವರಿಗೆ ನ್ಯಾಯ ದೊರಕಲಿದೆ ಎಂಬ ವಿಶ್ವಾಸ ತಮಗಿದೆ ಎಂದರು.

English summary
Bellary rural constituency Election: Independent MLAs support Rebel Sreeramulu declared ex Minister Goolihatti Shekhar in Bellary on Nov 9.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X