ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಕ್ಕಳು ಜೈಲು ಸೇರಲು ಹಿಂಜರಿಯುವುದಿಲ್ಲ : ದೇವೇಗೌಡ

By Prasad
|
Google Oneindia Kannada News

Deve gowda blames Lokayukta officials
ಬೆಂಗಳೂರು, ನ. 12 : ತನಿಖೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳನ್ನು ಫೋನ್ ಮಾಡಿ ಬೆದರಿಸುತ್ತಿರುವ ದೇವೇಗೌಡ ಮತ್ತು ಮಕ್ಕಳನ್ನು ಬಂಧಿಸಬೇಕೆಂಬ ಬಿಜೆಪಿಯ ಆಗ್ರಹಕ್ಕೆ ಪ್ರತ್ಯುತ್ತರಿಸಿರುವ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು, ತನಿಖಾಧಿಕಾರಿಗಳ ಕ್ರಮವನ್ನೇ ಪ್ರಶ್ನಿಸಿದ್ದಾರೆ.

ಶನಿವಾರ ಜೆಡಿಎಸ್ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ, ಲೋಕಾಯುಕ್ತ ಮಾಜಿ ಎಡಿಜಿಪಿ ಜೀವನ್ ಕುಮಾರ್ ಗಾಂವ್ಕರ್ ಅವರೊಂದಿಗೆ ದೂರವಾಣಿ ಮುಖಾಂತರ ಮಾತನಾಡಿದ್ದನ್ನು ಒಪ್ಪಿಕೊಂಡರು. ಆದರೆ, ಅವರನ್ನು ಬೆದರಿಸಿದ್ದನ್ನು ಸಾರಾಸಗಟಾಗಿ ನಿರಾಕರಿಸಿದರು.

ಗಾಂವ್ಕರ್ ಅವರೊಂದಿಗೆ ಮಾತನಾಡಿ, ಅವರ ಕೆಳಗಿನ ಅಧಿಕಾರಿಗಳು ಸರಿಯಾಗಿ ತನಿಖೆ ಮಾಡುತ್ತಿಲ್ಲ. ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರ ಪ್ರಕರಣವನ್ನು ಒಂದು ರೀತಿ, ತಮ್ಮ ಮಕ್ಕಳ ಪ್ರಕರಣಗಳನ್ನು ಇನ್ನೊಂದು ರೀತಿಯಲ್ಲಿ ತನಿಖೆ ಮಾಡುತ್ತಿದ್ದಾರೆ. ಅಲ್ಲದೆ, ಒತ್ತಡಕ್ಕೊಳಗಾಗಿ ತನಿಖೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಗೌಡರ ಕುಟುಂಬ ತನಿಖೆಗೆ ಮತ್ತು ಕಾನೂನಿಗೆ ಈಗಲೂ ಬದ್ಧವಾಗಿದೆ. ಹಾಗೆಯೆ ತನಿಖಾ ತಂಡಗಳು ಕೂಡ ತನಿಖೆಯ ಮಾನದಂಡವನ್ನು ಶಿರಸಾವಹಿಸಿ ಪಾಲಿಸಬೇಕು. ಬಾಲಕೃಷ್ಣ ಮತ್ತು ಕುಮಾರಸ್ವಾಮಿ ತಪ್ಪು ಮಾಡಿಲ್ಲ. ತಪ್ಪು ಮಾಡಿದ್ದೇ ಆದಲ್ಲಿ ಜೈಲು ಸೇರಲು ಹಿಂಜರಿಯುವುದಿಲ್ಲ ಎಂದು ನಿರ್ಭಾವುಕರಾಗಿ ನುಡಿದರು.

ಅಕ್ರಮ ಆಸ್ತಿ ಗಳಿಸಿದ್ದಾರೆಂದು ಆರೋಪದ ಮೇಲೆ ದೇವೇಗೌಡರ ಹಿರಿಯ ಮಗ ಎಚ್ ಡಿ ಬಾಲಕೃಷ್ಣೇ ಗೌಡರ ವಿರುದ್ಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳನ್ನು ಬೆದರಿಸುತ್ತಿರುವ ಗೌಡರು ಮತ್ತು ಮಕ್ಕಳ ವಿರುದ್ದ ಲೋಕಾಯುಕ್ತ ನ್ಯಾಯಾಲಯ ಮೊಕದ್ದಮೆ ದಾಖಲಿಸಬೇಕು ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಬಿಜೆ ಪುಟ್ಟಸ್ವಾಮಿ, ಸಚಿವ ರೇಣುಕಾಚಾರ್ಯ ಆಗ್ರಹಿಸಿದ್ದರು.

English summary
Former Prime Minister HD Deve Gowda has blamed Lokayukta officials' style of inquiry and admits talking to former Lokayukta ADGP Jeevan Kumar Gaonkar. He said in a press conference in Bangalore that, if found guilty his sons will not hesitate to go to jail.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X