ದೇವರು ಬರೆದ ಹಾಗೆ ಆಗಲಿ ನನ್ನ ಜೀವನ : ಶ್ರೀರಾಮುಲು

ನಾನು ಜೀವನದಲ್ಲಿ ಜನಾರ್ದನ ರೆಡ್ಡಿ ಮತ್ತು ಸುಷ್ಮಾ ಅಮ್ಮ ಅವರಿಗೆ ಆಭಾರಿಯಾಗಿದ್ದೇನೆ. ರಾಜಕೀಯವಾಗಿ ನಾನು ಇಷ್ಟು ಮುಂದುವರೆಯಲು ಅವರೇ ಕಾರಣ ಎಂದು ಎದೆ ತಟ್ಟಿ ಹೇಳುತ್ತೇನೆ. ಕರುಣಾಕರ ರೆಡ್ಡಿ ಚುನಾವಣಾ ಪ್ರಚಾರದಲ್ಲಿ ಗೈರು ಹಾಜರಾಗಿದ್ದಕ್ಕೆ ತಪ್ಪು ಕಲ್ಪನೆ ಬೇಡ, ಅವರು ಧಾರ್ಮಿಕ ಕಾರ್ಯಕ್ರಮದ ನಿಮಿತ್ತ ಹೊರಗಡೆ ಇದ್ದಾರೆ. ಇನ್ನು ಕೆಲ ದಿನಗಳಲ್ಲಿ ಅವರು ಬಳ್ಳಾರಿಗೆ ವಾಪಸಾಗಲಿದ್ದಾರೆ. ಬಳ್ಳಾರಿ ಜಿಲ್ಲೆಯ ಸರ್ವತೋಮುಖ ಅಭಿವೃದ್ದಿಗೆ ನಾವು ದುಡಿದಿದ್ದೇವೆ ಎನ್ನುವ ಮನಃಸಂತೋಷ ನಮಗಿದೆ ಎಂದರು.
ಬಿಜೆಪಿಯ ಕೆಲ ಸಂಪುಟ ಸಚಿವರು ನನ್ನನ್ನು ಪಕ್ಷದಿಂದ ಉಚ್ಛಾಟಿಸಲು ಕಾತುರರಾಗಿದ್ದರು. ಅವರ ಹೆಸರು ಹೇಳಲು ನಾನು ಬಯಸುವುದಿಲ್ಲ. ಲೋಕಾಯುಕ್ತ ವರದಿಯ ಬಗ್ಗೆ ಚರ್ಚಿಸುವ ಸಂಪುಟ ಸಭೆಯ ಮುನ್ನವೇ ನನ್ನನ್ನು ಪಕ್ಷದಿಂದ ಉಚ್ಛಾಟಿಸುವ ತೀರ್ಮಾನಕ್ಕೆ ಬಿಜೆಪಿ ಬಂದಿತ್ತು. ಹೀಗಾಗಿ ನನ್ನ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದಿದೆ. ಬಳ್ಳಾರಿ ಜಿಲ್ಲೆಯ ಎಲ್ಲಾ ಶಾಸಕರು ನನ್ನ ಜೊತೆ ಇದ್ದಾರೆ. ಆದರೆ ನಾನು ಯಾರನ್ನೂ ನನ್ನ ಕಡೆಗೆ ಸೆಳೆಯಲು ಯತ್ನಿಸಿಲ್ಲ ಎಂದು ರಾಮುಲು ಸ್ಪಷ್ಟಪಡಿಸಿದರು.
ನಾನು ಚುನಾವಣೆಯಲ್ಲಿ ಜಯಿಸುತ್ತೇನೆ ಎನ್ನುವ ಆಶಾಭಾವ ನನ್ನಲ್ಲಿದೆ. ಯಡಿಯೂರಪ್ಪ ಅವರ ಮೇಲೆ ನನಗೆ ತುಂಬಾ ಗೌರವ ಮತ್ತು ವಿಶ್ವಾಸವಿದೆ. ಸಿಬಿಐನವರು ಯಾವುದೇ ಕ್ಷಣದಲ್ಲಿ ಬಂಧಿಸಬಹುದು ಎನ್ನುವ ಭಯ ನನಗಿಲ್ಲ, ನಾನೇನೂ ತಪ್ಪು ಮಾಡಿಲ್ಲ. ದೇವರು ಬರೆದ ಹಾಗೆ ಆಗಲಿ ನನ್ನ ಜೀವನ. ನಾನು ಕಾಂಗ್ರೆಸ್ ಪಕ್ಷಕ್ಕೆ ಹತ್ತಿರವಾಗುತ್ತಿದ್ದೇನೆ ಎನ್ನುವ ಮಾತ್ರ ಸತ್ಯಕ್ಕೆ ದೂರವಾದುದು. ರಾಜಕೀಯದಲ್ಲಿ ಯಾರಿಗೆ ಯಾರೂ ದೊಡ್ಡವರಲ್ಲ, ಮತದಾರರೇ ಪ್ರಭುಗಳು ಎನ್ನುವ ವಿಷಯ ನಮಗೆ ತಿಳಿದಿದೆ ಎಂದು ರಾಮುಲು ಮಾತಿಗೆ ಮಂಗಳ ಹಾಡಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications