ಎಚ್ ಡಿ ಬಾಲಕೃಷ್ಣಗೌಡಗೆ ಫುಲ್ ರಿಲೀಫ್, ತನಿಖೆಗೆ ತಡೆ

HD Balakrishna Gowda
ಬೆಂಗಳೂರು, ನ.16: ದೇವೇಗೌಡರ ಹಿರಿಯ ಪುತ್ರ ಬಾಲಕೃಷ್ಣ ಗೌಡ ಅವರಿಗೆ ಲೋಕಾಯುಕ್ತ ವಿಶೇಷ ನ್ಯಾಯಲಯದಿಂದ ಬುಧವಾರ ಶುಭ ಸುದ್ದಿ ಸಿಕ್ಕಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಾಲಕೃಷ್ಣ ಗೌಡರ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಲಾಗಿದೆ.

ಸೆ.30ರಂದು ಎಚ್ ಡಿ ಬಾಲಕೃಷ್ಣಗೌಡರ ವಿರುದ್ಧ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ಬೃಹತ್ ವರದಿ ತಯಾರಿಸಿದ್ದರು. ವಿವಾದಿತ ಲೋಕಾಯುಕ್ತ ಸಹಾಯಕ ಮಹಾ ನಿರ್ದೇಶಕ ಜೀವನ್‌ಕುಮಾರ್ ಗಾಂವ್ಕರ್ ಅವರ ನೇತೃತ್ವದಲ್ಲಿ ತನಿಖೆ ನಡೆಸಿ, ಸುಮಾರು 20,000 ಪುಟಗಳ ವರದಿಯನ್ನು ಲೋಕಾಯುಕ್ತ ನ್ಯಾ. ಸುಧೀಂದ್ರರಾವ್ ಅವರಿಗೆ ನೀಡಾಗಿತ್ತು.

ಕಂದಾಯ ಇಲಾಖೆ, ಆದಾಯ ತೆರಿಗೆ ಇಲಾಖೆ ಮತ್ತು ಬ್ಯಾಂಕುಗಳಿಂದ ಸಾಕಷ್ಟು ಮಾಹಿತಿ ಸಂಗ್ರಹಿಸಲು ಎರಡು ಮೂರು ತಿಂಗಳಾದರೂ ಕಾಲಾವಕಾಶ ಬೇಕು ಎಂದು ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.

ಅದರೆ, ಪೊಲೀಸರ ಮನವಿ ಪುರಸ್ಕರಿಸದ ಲೋಕಾಯುಕ್ತ ನ್ಯಾ. ಸುಧೀಂದ್ರರಾವ್, ಪ್ರಕರಣದ ತನಿಖೆಗೆ 8 ವಾರಗಳ ಕಾಲ ತಡೆಯಾಜ್ಞೆ ನೀಡಿದ್ದಾರೆ. 8 ವಾರಗಳ ನಂತರ ಪ್ರಕರಣದ ಮುಂದಿನ ವಿಚಾರಣೆ ನಡೆಸುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+