ಭೈರಪ್ಪ ಅವರ ದೃಷ್ಟಿಯಲ್ಲಿ ಸಾಹಿತ್ಯ ಎಂದರೆ ಏನು...?

ಬದ್ಧತೆಯೂ ಇದೆ. ಆದರೆ ಸಾಹಿತ್ಯವೆಂಬ ಮೌಲ್ಯವನ್ನು ಈ ಬೇರೆ ಮೌಲ್ಯಗಳಿಗೆ ಅಡಿಯಾಳು ಮಾಡಿ ದುಡಿಸಹೊರಟರೆ ಸಾಹಿತ್ಯವು ಸಾಹಿತ್ಯವಾಗಿ ಉಳಿಯುವುದಿಲ್ಲ,
ಅಲ್ಲದೆ ಅದು ಪ್ರಚಾರಸಾಹಿತ್ಯವಾಗಿ ತೀರ ಅಲ್ಪಾಯುಷಿಯಾಗುತ್ತದೆ, ಎಂಬುದು ನನ್ನ ವಿಮರ್ಶಿತ ಶ್ರದ್ಧೆಯಾಗಿದೆ. ಸಾಹಿತ್ಯವೆಂಬುದೇ ಮೌಲ್ಯಾನ್ವೇಷಣಕ್ಕೆ ಅತ್ಯಂತ ವಿಶಾಲವಾದ ಸಾಧ್ಯತೆಗಳ ಕ್ಷೇತ್ರ.
ಅದು ರಾಜಕೀಯ ಪಕ್ಷಗಳು ಮತ್ತು ಸಕ್ರಿಯವಾದಿಗಳು ಒತ್ತಾಯಿಸುವ ಮೌಲ್ಯಗಳನ್ನು ಅವುಗಳಿಗಿಂತ ಎತ್ತರವಾದ ಹಂತದಲ್ಲಿ ನಿಂತು ಜೀವನದ ಇತರ ಮೌಲ್ಯಗಳೊಡನೆ ಅವುಗಳ ಸಂಬಂಧವನ್ನು ಪರಿಶೀಲಿಸಿ ಬೆಳಕು ಚೆಲ್ಲಬೇಕು.
ಸಾಹಿತ್ಯ ನಿರ್ಮಿತಿಯೊಂದರಿಂದಲೇ ಜೀವನದ ಅಶನವಸನಗಳ ನ್ಯಾಯ ಅನ್ಯಾಯಗಳ ವಾಸ್ತವ ಸಮಸ್ಯೆಯನ್ನು ಬಗೆಹರಿಸುವುದು ಸಾಧ್ಯವಿಲ್ಲ. ಸಾಹಿತಿಯು ಸಕ್ರಿಯನಾಗಬಾರದೆಂಬ ನಿಷೇಧವಿಲ್ಲ.
ಆದರೆ ಸಕ್ರಿಯನಾಗದವನು, ಸಕ್ರಿಯತೆಗೆ ಸಾಹಿತ್ಯ ನಿರ್ಮಿತಿಯನ್ನು ಅಡಿಯಾಳಾಗಿಸದವನು ನಿರ್ಮಿಸುವುದು ಸಾಹಿತ್ಯವೇ ಅಲ್ಲವೆಂಬ ಅಂಥ ಪ್ರಣಾಲಿಯಲ್ಲಿ ನನಗೆ ನಂಬಿಕೆ ಇಲ್ಲ. ತಮ್ಮ ಪ್ರಣಾಳಿಗೆ ಒಳಪಡದವರನ್ನು ಸಕ್ರಿಯವಾದಿಗಳು ಬೂರ್ಜ್ವಾ, ಬಲಪಂಥೀಯ ಎಂಬ ಹೆಸರುಗಳಿಂದ ಹಳಿಯುತ್ತಾರೆ;
ಸಾಮಾಜಿಕ ಸಮಸ್ಯೆಗಳು ಒಂದೆರಡು ದಶಕಗಳಲ್ಲಿ ಬದಲಾಗಿ, ಅವುಗಳಿಗೆ ಪರಿಹಾರವೆಂಬಂತೆ ಬರೆಯುವ ಸಾಹಿತ್ಯವು ಅನಂತರ ತನ್ನ ಪ್ರಸ್ತುತತೆಯನ್ನು ಕಳೆದುಕೊಳ್ಳುತ್ತದೆಂಬುದನ್ನು ಅವರು ಅರ್ಥ ಮಾಡಿಕೊಳ್ಳುವುದಿಲ್ಲ.
ಉದ್ದಕ್ಕೂ ನಾನು ಗಟ್ಟಿಯಾಗಿ ನಿಂತು ನನ್ನ ಬೌದ್ಧಿಕ ಮತ್ತು ಸೃಷ್ಟಿಶೀಲತೆಯ ಸ್ವಾತಂತ್ರ್ಯವನ್ನು ಉಳಿಸಿಕೊಂಡಿದ್ದೇನೆ.
ಸರಸ್ವತೀ ಸಮ್ಮಾನವು ನನ್ನ ಇತ್ತೀಚಿನ ಕೃತಿಗಳಲ್ಲಿ ಮಂದ್ರವನ್ನು ಆರಿಸಿರುವುದು ನನಗೆ ಸಂತೋಷವನ್ನುಂಟು ಮಾಡಿದೆ. ಒಬ್ಬ ಸಂಗೀತಗಾರ, ಅವನ ಸುತ್ತಮುತ್ತಣ ಘಟನೆ ಹಾಗು ಪಾತ್ರಗಳ ಮೂಲಕ ಕಲೆಗೂ ಜೀವನದ ಇತರ ಮೌಲ್ಯಗಳಿಗೂ ಇರುವ ಸಂಬಂಧವನ್ನು ನಾನು ಈ ಕಾದಂಬರಿಯಲ್ಲಿ ಅನ್ವೇಷಿಸಿದ್ದೇನೆ.
ಇಡೀ ಕಾದಂಬರಿಯಲ್ಲಿ ಸಂಗೀತವೇ ಒಂದು ಮುಖ್ಯ ಪಾತ್ರವಾಗಿದೆ. ಸಂಗೀತವೇ ಅತ್ಯಂತ ಶುದ್ಧವಾದದ್ದು. ಇತರ ಕಲೆಗಳಾದ ಚಿತ್ರ, ಶಿಲ್ಪ, ಸಾಹಿತ್ಯ ಮೊದಲಾದವುಗಳ ತುಲನೆಯಲ್ಲಿ ಭಾವ ಮತ್ತು ರಸಗಳನ್ನು ಪರಿಶುದ್ಧ ಅಂದರೆ ಹಸಿಯಾದ, ಆದ್ದರಿಂದ ಅತ್ಯಂತ ಶಕ್ತವಾದ ಸ್ವರೂಪದಲ್ಲಿ ವ್ಯಕ್ತಪಡಿಸುವಂಥದು. ಅದು ಎಲ್ಲ ಮೂಲ ಮತ್ತು ಮಿಶ್ರ ರಸಗಳನ್ನು ಸೃಷ್ಟಿಸಿಕೊಂಡು ಮಂದ್ರದ ಆಳದಿಂದ ತಾರತಾರದ ಎತ್ತರಕ್ಕೆ ಸಂಚರಿಸುತ್ತದೆ.
ಮಂದ್ರವು ಸಮಗ್ರ ಅಂತರ್ಮುಖತೆಯ ಸ್ಥಿತಿ; ಎಂದರೆ ಧ್ಯಾನ.
-ನಮಸ್ಕಾರ
ಎಸ್.ಎಲ್ ಭೈರಪ್ಪ
ಕೃಪೆ: ಎಸ್ಎಲ್ ಭೈರಪ್ಪ.ಕಾಂ
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications