Get Updates
Get notified of breaking news, exclusive insights, and must-see stories!

ಭೈರಪ್ಪನವರಿಗೆ ಜ್ಞಾನಪೀಠಕ್ಕೆ ಸಮಾನಾಂತರ ಸಮ್ಮಾನ

SL Bhyrappa
ನವದೆಹಲಿ, ನ.17: ಕನ್ನಡದ ಜನಪ್ರಿಯ ಕಾದಂಬರಿಕಾರ ಡಾ. ಎಸ್‌.ಎಲ್‌.ಭೈರಪ್ಪ ಅವರಿಗೆ 2010ನೇ ಸಾಲಿನ 'ಸರಸ್ವತಿ ಸಮ್ಮಾನ್‌' ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕನ್ನಡ ಸಾಹಿತ್ಯ ಲೋಕಕ್ಕೆ ಪ್ರಪ್ರಥಮ ಬಾರಿಗೆ 'ಸರಸ್ವತಿ ಸಮ್ಮಾನ್' ಪ್ರಶಸ್ತಿ ದೊರೆಕಿಸಿಕೊಟ್ಟ ಕೀರ್ತಿ ಈ ಮೇರು ಲೇಖಕರಿಗೆ ಸಲ್ಲುತ್ತದೆ.

ಭೈರಪ್ಪ ಅವರು 2002ರಲ್ಲಿ ಬರೆದ 'ಮಂದ್ರ' ಕಾದಂಬರಿಯನ್ನು ಸುಪ್ರೀಂಕೋರ್ಟ್ ನ ಮಾಜಿ ಮುಖ್ಯ ನ್ಯಾಯಮೂರ್ತಿ ಜಿಬಿ ಪಟ್ನಾಯಕ್ ನೇತೃತ್ವದ ಸಮಿತಿ ಪ್ರತಿಷ್ಠಿತ ಸರಸ್ವತಿ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಮಾಡಿ ಕೆಕೆ ಬಿರ್ಲಾ ಫೌಂಡೇಶನ್‌ ಗೆ ಶಿಫಾರಸ್ಸು ಮಾಡಲಾಗಿತ್ತು.

ರಾಜ್ಯಸಭೆ ಸದಸ್ಯ ಕರಣ್‌ ಸಿಂಗ್‌ ಮತ್ತು ಕೆ.ಕೆ.ಬಿರ್ಲಾ ಪ್ರತಿಷ್ಠಾನದ ಅಧ್ಯಕ್ಷೆ ಶೋಭನಾ ಭಾರ್ತಿಯಾ ಅವರು ಭೈರಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಸರಸ್ವತಿ ಸಮ್ಮಾನ್ ಪ್ರಶಸ್ತಿ: ಈ ಪ್ರಶಸ್ತಿಯು 7.5 ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. 25 ಭಾರತೀಯ ಭಾಷೆಗಳಲ್ಲಿ, ಕಳೆದ 10 ವರ್ಷಗಳಲ್ಲಿ ರಚಿತಗೊಂಡ ಕಾದಂಬರಿಗಳ ನಡುವೆ ಸ್ಪರ್ಧೆಯಿತ್ತು. ಅಂತಿಮವಾಗಿ 'ಮಂದ್ರ' ಕಾದಂಬರಿಯನ್ನು ಶ್ರೇಷ್ಠ ಕೃತಿಯಾಗಿ ಆರಿಸಲಾಗಿದೆ.

ಕರ್ನಾಟಕದಲ್ಲಿ ಅತಿ ಹೆಚ್ಚು ಓದುಗರನ್ನು ಹೊಂದಿರುವ ಕಾದಂಬರಿಕಾರ ಎಂಬ ಖ್ಯಾತಿಯನ್ನು ಭೈರಪ್ಪ ಅವರು ಹೊಂದಿದ್ದಾರೆ. ಒಟ್ಟು 22 ಕಾದಂಬರಿ ರಚಿಸಿದ್ದಾರೆ. ಇತ್ತೀಚೆಗೆ ಬಿಡುಗಡೆಗೊಂಡ 'ಕವಲು' ಕಾದಂಬರಿ 18 ಬಾರಿ ಮುದ್ರಣಗೊಂಡು ದಾಖಲೆ ಬರೆದಿದೆ.

ಸರಸ್ವತಿ ಸಮ್ಮಾನ ಪಡೆದ ಭೈರಪ್ಪ ಹೊರಳಿದ್ದು ಸಂತೇಶಿವರದ ಕಡೆಗೆ....

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+