ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ

By Mahesh
|
Google Oneindia Kannada News

Rahul Gandhi
ಮುಂಬೈ, ನ.17 : ಉತ್ತರ ಪ್ರದೇಶದ ಜನತೆ ಮುಂಬೈನಲ್ಲಿ ಉದ್ಯೋಗದ ಭಿಕ್ಷೆಯನ್ನು ಬೇಡುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಹೇಳಿಕೆಯ ವಿರುದ್ಧ ಸಮಾಜವಾದಿ ಪಕ್ಷದ ನಗರ ಉಪಾಧ್ಯಕ್ಷ ಫಾರೂಕ್ ಘೋಸಿ ದಕ್ಷಿಣ ಮುಂಬೈನ ಬಾಂದ್ರಾದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಉತ್ತ ಪ್ರದೇಶದ ಯುವಕರು ಎಷ್ಟು ದಿನಗಳ ಕಾಲ ಮುಂಬೈನಲ್ಲಿ ಭಿಕ್ಷೆಯನ್ನು ಬೇಡುತ್ತಾರೆ ಎಂದು ರಾಹುಲ್ ಗಾಂಧಿ ಉತ್ತರ ಪ್ರದೇಶದ ಫುಲ್‌ಪುರ್ ನಗರದಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಕಿಡಿಕಾರಿದ್ದರು.

ಭಾರತೀಯ ಸಂವಿಧಾನ ಕಾಯ್ದೆ 500 ಮತ್ತು ಅವಮಾನ ಕಾಯ್ದೆ 504ರ ಅನ್ವಯ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ದಿನಗಳಲ್ಲಿ ನ್ಯಾಯಾಲಯ ವಿಚಾರಣೆ ನಡೆಸಲಿದೆ ಎಂದು ಘೋಸಿ ಪರ ವಕೀಲ ಮನೋಜ್ ತಿವಾರಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ವಾಸಿಸುವ ಮತ್ತು ಮುಂಬೈನಲ್ಲಿ ಉದ್ಯೋಗದಲ್ಲಿರುವ ಜನತೆ ರಾಹುಲ್ ಹೇಳಿಕೆಯ ವಿರುದ್ಧ ಭಾರಿ ಪ್ರತಿಭಟನೆಯನ್ನು ನಡೆಸಿದ್ದಾರೆ.

ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಆದರೆ, ಉತ್ತರ ಪ್ರದೇಶದಲ್ಲಿ ಯಾವುದೇ ಅಬಿವೃದ್ಧಿ ಕಾರ್ಯಗಳನ್ನು ಮಾಡದೇ ಜನತೆಯನ್ನು ಭಿಕ್ಷುಕರನ್ನಾಗಿಸಿದೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ಕಟುವಾಗಿ ಟೀಕಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಕೂಡಾ ರಾಹುಲ್ ಗಾಂಧಿಯನ್ನು ಕಟು ಶಬ್ದಗಳಿಂದ ಟೀಕಿಸಿದ್ದಾರೆ.

English summary
MNS Raj Thackrey, Uttar Pradesh CM Mayawati condemns Rahul Gandhi comments on Uttar Pradesh migrants. Rahul Gandhi is in trouble for marking migrants as beggar, a FIR is registered against Rahul Gandhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X