ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುಡಿತದ ಚಟ, ಜೀವನದಲ್ಲಿ ಜಿಗುಪ್ಸೆ,ನೇಣಿಗೆ ಶರಣು

By Rajendra
|
Google Oneindia Kannada News

Drunk man suicide in Hiriyur
ಹಿರಿಯೂರು, ನ.18: ಪ್ರತಿದಿನ ಕುಡಿಯುವ ಚಟವಿದ್ದ ವ್ಯಕ್ತಿಯೊಬ್ಬ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಹಾಕಿಕೊಂಡು ಮೃತಪಟ್ಟಿರುವ ಘಟನೆ ತಾಲ್ಲೂಕಿನ ದೇವರಕೊಟ್ಟ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರಂಗಸ್ವಾಮಿ (55) ಎಂಬುವನಿಗೆ ಯಾವಾಗಲೂ ಕುಡಿಯುವ ಚಟವಿದ್ದು, ಕೂಲಿ ಮಾಡಿ ತಂದ ಹಣವನ್ನೆಲ್ಲಾ ಕುಡಿತಕ್ಕೆ ಉಪಯೋಗಿಸುತ್ತಿದ್ದ. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಗ್ರಾಮದ ತಿಪ್ಪೇಸ್ವಾಮಿ ಎಂಬುವರ ಹೊಲದ ಬಳಿ ಹೊಂಗೆ ಮರಕ್ಕೆ ಪಂಚೆಯಿಂದ ನೇಣು ಹಾಕಿಕೊಂಡು ಮೃತಪಟ್ಟಿರುತ್ತಾನೆ.

ಈ ಬಗ್ಗೆ ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿರುತ್ತದೆ. ಕೆಲವರು ಜೀವನದಲ್ಲಿ ಜಿಗುಪ್ಸೆಗೊಂಡು ಕುಡಿತದ ಚಟಕ್ಕೆ ಬೀಳುತ್ತಾರೆ. ಆದರೆ ರಂಗಸ್ವಾಮಿಗೆ ಕುಡಿತವೇ ಬೇಸರವಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆಯಿಂದ ಗ್ರಾಮಸ್ಥರು ಮೂಕವಿಸ್ಮಿತರಾಗಿದ್ದಾರೆ. (ಒನ್‌ಇಂಡಿಯಾ ಕನ್ನಡ)

English summary
A 55-year-old man suicide by hanging himself in Hiriyur village, Karnataka on Wednesday afternoon. No suicide note has been recovered.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X