ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕುಡಿತದ ಚಟ, ಜೀವನದಲ್ಲಿ ಜಿಗುಪ್ಸೆ,ನೇಣಿಗೆ ಶರಣು
ಗ್ರಾಮದ ರಂಗಸ್ವಾಮಿ (55) ಎಂಬುವನಿಗೆ ಯಾವಾಗಲೂ ಕುಡಿಯುವ ಚಟವಿದ್ದು, ಕೂಲಿ ಮಾಡಿ ತಂದ ಹಣವನ್ನೆಲ್ಲಾ ಕುಡಿತಕ್ಕೆ ಉಪಯೋಗಿಸುತ್ತಿದ್ದ. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಗ್ರಾಮದ ತಿಪ್ಪೇಸ್ವಾಮಿ ಎಂಬುವರ ಹೊಲದ ಬಳಿ ಹೊಂಗೆ ಮರಕ್ಕೆ ಪಂಚೆಯಿಂದ ನೇಣು ಹಾಕಿಕೊಂಡು ಮೃತಪಟ್ಟಿರುತ್ತಾನೆ.
ಈ ಬಗ್ಗೆ ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿರುತ್ತದೆ. ಕೆಲವರು ಜೀವನದಲ್ಲಿ ಜಿಗುಪ್ಸೆಗೊಂಡು ಕುಡಿತದ ಚಟಕ್ಕೆ ಬೀಳುತ್ತಾರೆ. ಆದರೆ ರಂಗಸ್ವಾಮಿಗೆ ಕುಡಿತವೇ ಬೇಸರವಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆಯಿಂದ ಗ್ರಾಮಸ್ಥರು ಮೂಕವಿಸ್ಮಿತರಾಗಿದ್ದಾರೆ. (ಒನ್ಇಂಡಿಯಾ ಕನ್ನಡ)
Comments
English summary
A 55-year-old man suicide by hanging himself in Hiriyur village, Karnataka on Wednesday afternoon. No suicide note has been recovered.
Story first published: Saturday, November 19, 2011, 10:59 [IST]