ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಾಯುಕ್ತ ಪೀಠಕ್ಕೆ ನ್ಯಾ ಬನ್ನೂರುಮಠ ಹೆಸರೇ ಅಂತಿಮ

By Srinath
|
Google Oneindia Kannada News

justice-sr-bannur-matt-next-lokayukta-sadanada
ಕಲ್ಲಡ್ಕ, ನ.18: ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬನ್ನೂರುಮಠರ ನೇಮಕ ವಿಚಾರವನ್ನು ಪುನರ್ ಪರಿಶೀಲಿಸುವ ಅಗತ್ಯವಿಲ್ಲ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ನ್ಯಾಯಮೂರ್ತಿ ಬನ್ನೂರುಮಠ ಅವರೇ ಮುಂದಿನ ಲೋಕಾಯುಕ್ತ ಎಂದು ಶುಕ್ರವಾರ ಘೋಷಿಸಿದ್ದಾರೆ.

ಬಂಟ್ವಾಳ ತಾಲೂಕಿನ ಅಳಿಕೆಯಲ್ಲಿ ನಡೆಯಲಿರುವ ದ.ಕ. ಜಿಲ್ಲಾ 17ನೆ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಲು ಆಗಮಿಸಿದ ಅವರು, ಕಲ್ಲಡ್ಕದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬನ್ನೂರು ಮಠರನ್ನೇ ನೇಮಕಗೊಳಿಸಲು ಸರಕಾರ ನಿರ್ಧರಿಸಿದೆ. ಈ ಬಗ್ಗೆ ಪುನರ್ ಪರಿಶೀಲನೆ ನಡೆಸುವ ಅಗತ್ಯವಿಲ್ಲ. ಅವರನ್ನೇ ನೇಮಕಗೊಳಿಸುವಂತೆ ರಾಜ್ಯಪಾಲರಲ್ಲಿ ಮನವಿ ಮಾಡಲಾಗುವುದು ಎಂದು ಡಿ.ವಿ. ಸದಾನಂದ ಗೌಡ ತಿಳಿಸಿದರು.

ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದು, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಚುನಾವಣಾ ಪ್ರಚಾರಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪರೊಂದಿಗೆ ನ.22ರಂದು ಬಳ್ಳಾರಿಗೆ ತೆರಳಲಿದ್ದೇವೆ. ಅಲ್ಲಿ ನ. 24ರವರೆಗೆ ಒಟ್ಟು ಮೂರು ದಿನಗಳ ಕಾಲ ನಾವೆಲ್ಲರೂ ಬಿಜೆಪಿ ಅಭ್ಯರ್ಥಿ ಗಾದಿ ಲಿಂಗಪ್ಪರ ಪರ ಪ್ರಚಾರದಲ್ಲಿ ತೊಡಗಲಿದ್ದೇವೆ ಎಂದೂಬ ಸಿ ಎಂ ಸದಾನಂದ ಿದೇ ವಳೆ ಹೇಳಿದರು.

English summary
Chief Minister D V Sadananda Gowda has clarified that Justice SR Bannur Matt is the the new Lokayukta for Karnataka. He was speaking to the reporters in Kalladka in Bantval a shortwhile ago.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X