ಬಳ್ಳಾರಿ ಗ್ರಾಮಾಂತರದಲ್ಲಿ 2 ದಿನ ಯಡಿಯೂರಪ್ಪ ರೋಡ್ ಷೋ

ಮಂಗಳವಾರ ಮತ್ತು ಬುಧವಾರ ಅವರು ರೋಡ್ ಷೋ ನಡೆಸಲಿದ್ದು, ಎರಡು ಸಮಾವೇಶ ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಯಡಿಯೂರಪ್ಪ ಜತೆಗೆ ಪ್ರಚಾರ ನಡೆಸಲಿದ್ದು, ಪಕ್ಷದ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರೂ ಸಾಥ್ ನೀಡಲಿದ್ದಾರೆ.
ಗಮನಾರ್ಹವೆಂದರೆ ಯಡಿಯೂರಪ್ಪ ಬುಧವಾರದ ನಂತರ ಅಗತ್ಯ ಕಂಡುಬಂದರೆ ಎರಡನೇ ಹಂತದಲ್ಲಿ ಮತ್ತೆ ಎರಡು ದಿನಗಳ ಕಾಲ ಅವರು ಪ್ರಚಾರ ನಡೆಸುವ ಸಾಧ್ಯತೆಯಿದೆ. ಭಾನುವಾರ ತಮ್ಮ ಇಷ್ಟ ದೇವತೆ ಕಾಶ್ಮೀರದಲ್ಲಿನ ವೈಷ್ಣೋದೇವಿ ದರ್ಶನ ಪಡೆದು ವಾಪಸಾಗಿದ್ದ ಯಡಿಯೂರಪ್ಪ ಮಂಗಳವಾರ ಬಳ್ಳಾರಿಯಲ್ಲಿ ಪ್ರಚಾರ ನಡೆಸಲು ಸಿದ್ಧರಾಗಿದ್ದಾರೆ.
ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಿಲುಕಿ ಜೈಲು ಸೇರಿದ್ದ ಯಡಿಯೂರಪ್ಪ ಅವರು ಜೈಲಿನಿಂದ ಹೊರಬರುವಷ್ಟರಲ್ಲಿ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗಿತ್ತು. ಆದರೆ, ಬಳ್ಳಾರಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಪಟ್ಟು ಹಿಡಿದಿದ್ದ ಯಡಿಯೂರಪ್ಪ ಅವರನ್ನು ಕೊನೆಗೂ ಪಕ್ಷದ ವರಿಷ್ಠರು ಮನವೊಲಿಸುವಲ್ಲಿ ಯಶಸ್ವಿಯಾದರು.












Click it and Unblock the Notifications