ವಧು ಸಿಗದ ಬ್ರಾಹ್ಮಣ ಹುಡುಗರ ಬೃಹತ್ ಜಾಥಾ

ಈಗಲೇ ಹೀಗಾದರೆ ಹೇಗೆ? ಇನ್ನು ಕೆಲ ದಶಕಗಳ ಕಾಲ ಈ ಸಮಸ್ಯೆ ಹೀಗೆಯೇ ಮುಂದುವರಿದರೆ ಇಡೀ ಬ್ರಾಹ್ಮಣ ಸಮುದಾಯವೇ ನಶಿಸಿ ಹೋಗುವ ಅಪಾಯದಲ್ಲಿದೆ ಎನ್ನುವ ಅಂಶ ಕಾಡುತ್ತಿದೆ. ಮದುವೆಗೆ ರೆಡಿಯಾಗಿ ನಿಂತಿರುವ ವರಗಳಿಗೆ ವಧುಗಳನ್ನು ಹುಡುಕುವುದೇ ದುಸ್ತರವಾಗುತ್ತಿದೆ.
ಈ ಸಮಸ್ಯೆಗೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ಬ್ರಾಹ್ಮಣ ಜಾಗೃತಿ ಮತ್ತು ಸಾಮರಸ್ಯ ಪಾದಯಾತ್ರೆ ಅಭಿಯಾನವನ್ನು ಡಿಸೆಂಬರ್ 11 ಮತ್ತು 12ರಂದು ಹಮ್ಮಿಕೊಳ್ಳಲಾಗಿದ್ದು, ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಿಂದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯವರೆಗೆ ಪಾದಯಾತ್ರೆ ಮಾಡಲು ಉದ್ದೇಶಿಸಲಾಗಿದೆ.
ಈ ಅಭಿಯಾನದ ಸಂಘಟಕ ಆನಂದ್ ಅವರ ಪ್ರಕಾರ, ಮೊದಲಾದರೆ ಗಂಡುಗಳಿಗೆ 25ರೊಳಗೆ ಮತ್ತು ಹೆಣ್ಣುಗಳಿಗೆ 22ರೊಳಗೆ ಮದುವೆಯಾಗುತ್ತಿತ್ತು. ಆದರೆ ಈಗ, ಗಂಡಿಗೆ 32 ವರ್ಷ ದಾಟಿದರೂ ಮದುವೆಯಾಗುವ ಯೋಗ ಕೂಡಿ ಬರುತ್ತಿಲ್ಲ. ಕುಟುಂಬ ಯೋಜನೆಯೇ ದೊಡ್ಡ ಸಮಸ್ಯೆಯಾಗಿದೆ.
ಕರ್ನಾಟಕದ ಕನ್ಯಾಮಣಿ ಡೇಟಾಬೇಸ್ ತಯಾರಿಸುವ ಯೋಜನೆ ಹಾಕಿಕೊಳ್ಳಲಾಗಿದೆ ಮತ್ತು ಗುಜರಾತ್, ಮಹಾರಾಷ್ಟ್ರ, ಉತ್ತರ ಪ್ರದೇಶದಿಂದಲೂ ಬ್ರಾಹ್ಮಣ ಹುಡುಗಿಯರ ವಿವರ ಪಡೆಯುವ ಉದ್ದೇಶವಿದೆ. ಜೊತೆಗೆ ಶಿಕ್ಷಣ ಮತ್ತು ಉದ್ಯೋಗದ ಜಾಗೃತಿ ಮೂಡಿಸುವ ಉದ್ದೇಶವೂ ಇದೆ.
ಬಿಎ, ಬಿಎಸ್ ಸಿ, ಬಿಕಾಂ ಮಾಡಿರುವ ಹುಡುಗರು ಹೋಗಲಿ ಇಂಜಿನಿಯರಿಂಗ್ ಮಾಡಿರುವವರೂ ಇತರರೊಂದಿಗೆ ರಿಂಗಾ ರಿಂಗಾ ಆಡುವಂತಾಗಿದೆ. ಸ್ವಉದ್ಯೋಗ ಮಾಡುತ್ತಿರುವ ಪಡ್ಡೆಗಳ ಪಾಡಂತೂ ಬೇಡವೇ ಬೇಡ. ಈ ಅಭಿಯಾನಕ್ಕೆ ನ. 27ರಂದು ಮಲ್ಲೇಶ್ವರದ ರಾಮಮಂದಿರದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್ ಸುರೇಶ್ ಕುಮಾರ್ ಅವರು ಚಾಲನೆ ನೀಡಲಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications