ಕಂಬಾರರಿಂದ ಜ್ಞಾನಪೀಠ ಕಿತ್ತುಕೊಳ್ಳಿ : ಠಾಕ್ರೆ ಕಿಡಿನುಡಿ

"ಕರ್ನಾಟಕದ ಗಡಿ ಪ್ರದೇಶದಲ್ಲಿರುವ ಮರಾಠಿಗರು ಹುಟ್ಟಿದ್ದೇ ದಂಗೆ ಎಬ್ಬಿಸಲು ಎಂದು ಕಂಬಾರರು ಹೇಳಿದ್ದಾರೆ. ಮರಾಠಿ ಜನರಿಗೆ ತಮ್ಮ ಮಾತೃ ಭಾಷೆಯಲ್ಲಿ ಶಿಕ್ಷಣ ಬೇಕಿದ್ದರೆ ಮಹಾರಾಷ್ಟ್ರಕ್ಕೆ ಹೋಗಬೇಕು ಎಂದು ಕೆಣಕಿದ್ದಾರೆ" ಎಂದು ಠಾಕ್ರೆ ತಮ್ಮ ಮುಖವಾಣಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯದಲ್ಲಿ ಕಿಡಿಕಾರಿದ್ದಾರೆ.
ನೌಕರಿಗೆಂದು ಕರ್ನಾಟಕದ ಲಕ್ಷಾಂತರ ಜನರು ಮುಂಬೈ ಮತ್ತು ಮಹಾರಾಷ್ಟ್ರದ ಅನೇಕ ಕಡೆಗಳಲ್ಲಿ ವಾಸವಾಗಿದ್ದಾರೆ. ಮುಂಬೈನ ಹೊಟೇಲ್ ಉದ್ಯಮವನ್ನು ಉಡುಪಿಯವರು ಆಳುತ್ತಿದ್ದಾರೆ. ಅವರೆಲ್ಲರನ್ನು ತಮ್ಮ ಊರಿಗೆ ವಾಪಸ್ ಕಳಿಸಿದರೆ ಏನಾಗುತ್ತದೆ ಎಂದು ಕನ್ನಡಿಗರನ್ನು ಎಚ್ಚರಿಸಿದ್ದಾರೆ.
ಭಾಷೆಯೆಂಬುದು ಯಾರ ವೈರಿಯೂ ಅಲ್ಲ. ಭೀಮಸೇನ ಜೋಶಿ, ಗಂಗೂಬಾಯಿ ಹಾನಗಲ್, ಗಿರೀಶ್ ಕಾರ್ನಾಡ್, ಡಾ. ಶಿವರಾಮ್ ಕಾರಂತ್, ಡಾ. ಯುಆರ್ ಅನಂತಮೂರ್ತಿಯಂಥ ದಿಗ್ಗಜರು ಮರಾಠಿಗರ ಮೇಲೆ ಛಾಪು ಮೂಡಿಸಿದ್ದಾರೆ ಎಂಬುದು ಕಂಬಾರರಿಗೆ ತಿಳಿದಿರಲಿ ಎಂದು ಕಿಡಿನುಡಿಯಾಡಿದ್ದಾರೆ.
ಬೆಳಗಾವಿಯಲ್ಲಿ ಕನ್ನಡ ಮತ್ತು ಮರಾಠಿ ನಡುವಿನ ಕದನಕ್ಕೆ ಮತ್ತೆ ಕಹಳೆ ಊದಲಾಗಿದೆ. ಕನ್ನಡ ವಿರೋಧಿ ಹೇಳಿಕೆ ನೀಡುತ್ತ ಜನರನ್ನು ಕೆಣಕುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಪ್ರಭುತ್ವವಿರುವ ಬೆಳಗಾವಿ ಮಹಾನಗರ ಪಾಲಿಕೆಯನ್ನು ಏಕೆ ವಿಸರ್ಜಿಸಬಾರದು ಎಂದು ಕೇಳಿ ಕರ್ನಾಟಕ ಸರಕಾರ ಶೋಕಾಸ್ ನೋಟೀಸ್ ಜಾರಿ ಮಾಡಿದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications