ಬಾಳಾ ಕೆಣಕುನುಡಿಗೆ ಸವಣೂರಿನಲ್ಲಿ ಕರವೇ ಕಿಡಿ

ಶುಕ್ರವಾರ ಸಂಜೆ ಸವಣೂರಿನ ಭರಮಲಿಂಗೇಶ್ವರ ವೃತ್ತದಲ್ಲಿ ಟೈರ್ಗೆ ಬೆಂಕಿ ಹಚ್ಚುವ ಮೂಲಕ ತಮ್ಮ ಕಿಚ್ಚನ್ನು ವ್ಯಕ್ತಪಡಿಸಿದ ಕ.ರ.ವೇ ಕಾರ್ಯಕರ್ತರು, ಬೆಳಗಾವಿ ಮೇಯರ್ ಹಾಗೂ ಬಾಳಾ ಠಾಕ್ರೆ ಅವರ ವಿರುದ್ದ ಘೋಷಣೆಗಳನ್ನು ಕೂಗಿದರು.
ಇರುವ ಸತ್ಯವನ್ನೇ ನುಡಿದಿರುವ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರನ್ನು ಠಾಕ್ರೆ ಅಪಮಾನಿಸಿದ್ದಾರೆ. ತನ್ಮೂಲಕ ಸಮಸ್ತ ಕನ್ನಡಿಗರ ಭಾವನೆಗಳಿಗೆ ನೋವು ಮಾಡಿದ್ದಾರೆ. ಪ್ರತಿಯೊಂದು ಬಾರಿಯೂ ಕನ್ನಡಿಗರ ಬಗ್ಗೆ ತಾತ್ಸಾರ ತೋರುತ್ತಿರುವ ಠಾಕ್ರೆ ಅನಗತ್ಯವಾದ ವಿವಾದವನ್ನು ಸೃಷ್ಠಿಸುತ್ತಿದ್ದಾರೆ ಎಂದು ಕರವೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡದ ಅನ್ನವನ್ನು ಉಂಡು ಕನ್ನಡ ನಾಡಿಗೆ ಅಪಮಾನ ಮಾಡಿರುವ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ತನ್ನ ಸ್ಥಾನದ ಗೌರವವನ್ನು ಕಳೆದುಕೊಂಡಿದ್ದಾರೆ. ಇಂತಹ ವ್ಯಕ್ತಿಗಳನ್ನು ಮೇಯರ್ ಸ್ಥಾನದಿಂದ ಕಿತ್ತೆಸೆಯಬೇಕು. ಪಾಲಿಕೆಯನ್ನು ಸೂಪರ್ ಸೀಡ್ ಮಾಡುವ ಮೂಲಕ, ಬೆಳಗಾವಿಯ ಎಮ್.ಇ.ಎಸ್ ಸಂಘಟನೆಗೆ ತಕ್ಕ ಪಾಠವನ್ನು ಕಲಿಸಬೇಕು ಎಂದು ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರತಿಭಟನೆಯ ಸಂದರ್ಭದಲ್ಲಿ ಕ.ರ.ವೇ ಅಧ್ಯಕ್ಷರಾದ ಮಲ್ಲಾರೆಪ್ಪ ತಳ್ಳಿಹಳ್ಳಿ, ಪದಾಧಿಕಾರಿಗಳಾದ ಉಮೇಶ ಕಳಕಪ್ಪನವರ್, ಪರಶುರಾಮ್ ಈಳಿಗೇರ, ರಾಘವೇಂದ್ರ ರೇವಣಕರ್, ಅಬ್ದುಲರೆಹೆಮಾನ ಬಿಜಾಪುರಿ, ಮಾಂತೇಶ ಕುಲಕರ್ಣಿ, ನರಸಿಂಹ ನಾಮಾವಳಿ, ಸಿ.ಟಿ ಬುಶೆಟ್ಟಿ, ಗದಿಗೆಪ್ಪ ಬಾರ್ಕಿ, ಜಗದೀಶ ಸಾಲಿಮಠ, ಪುಟ್ಟಪ್ಪ ತಿಮ್ಮಣ್ಣನವರ್, ಬಸನಗೌಡ ಪಾಟೀಲ ಸೇರಿದಂತೆ ಹಲವಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications