ಬಾಳಾ ಕೆಣಕುನುಡಿಗೆ ಸವಣೂರಿನಲ್ಲಿ ಕರವೇ ಕಿಡಿ

ಶುಕ್ರವಾರ ಸಂಜೆ ಸವಣೂರಿನ ಭರಮಲಿಂಗೇಶ್ವರ ವೃತ್ತದಲ್ಲಿ ಟೈರ್ಗೆ ಬೆಂಕಿ ಹಚ್ಚುವ ಮೂಲಕ ತಮ್ಮ ಕಿಚ್ಚನ್ನು ವ್ಯಕ್ತಪಡಿಸಿದ ಕ.ರ.ವೇ ಕಾರ್ಯಕರ್ತರು, ಬೆಳಗಾವಿ ಮೇಯರ್ ಹಾಗೂ ಬಾಳಾ ಠಾಕ್ರೆ ಅವರ ವಿರುದ್ದ ಘೋಷಣೆಗಳನ್ನು ಕೂಗಿದರು.
ಇರುವ ಸತ್ಯವನ್ನೇ ನುಡಿದಿರುವ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರನ್ನು ಠಾಕ್ರೆ ಅಪಮಾನಿಸಿದ್ದಾರೆ. ತನ್ಮೂಲಕ ಸಮಸ್ತ ಕನ್ನಡಿಗರ ಭಾವನೆಗಳಿಗೆ ನೋವು ಮಾಡಿದ್ದಾರೆ. ಪ್ರತಿಯೊಂದು ಬಾರಿಯೂ ಕನ್ನಡಿಗರ ಬಗ್ಗೆ ತಾತ್ಸಾರ ತೋರುತ್ತಿರುವ ಠಾಕ್ರೆ ಅನಗತ್ಯವಾದ ವಿವಾದವನ್ನು ಸೃಷ್ಠಿಸುತ್ತಿದ್ದಾರೆ ಎಂದು ಕರವೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡದ ಅನ್ನವನ್ನು ಉಂಡು ಕನ್ನಡ ನಾಡಿಗೆ ಅಪಮಾನ ಮಾಡಿರುವ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ತನ್ನ ಸ್ಥಾನದ ಗೌರವವನ್ನು ಕಳೆದುಕೊಂಡಿದ್ದಾರೆ. ಇಂತಹ ವ್ಯಕ್ತಿಗಳನ್ನು ಮೇಯರ್ ಸ್ಥಾನದಿಂದ ಕಿತ್ತೆಸೆಯಬೇಕು. ಪಾಲಿಕೆಯನ್ನು ಸೂಪರ್ ಸೀಡ್ ಮಾಡುವ ಮೂಲಕ, ಬೆಳಗಾವಿಯ ಎಮ್.ಇ.ಎಸ್ ಸಂಘಟನೆಗೆ ತಕ್ಕ ಪಾಠವನ್ನು ಕಲಿಸಬೇಕು ಎಂದು ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರತಿಭಟನೆಯ ಸಂದರ್ಭದಲ್ಲಿ ಕ.ರ.ವೇ ಅಧ್ಯಕ್ಷರಾದ ಮಲ್ಲಾರೆಪ್ಪ ತಳ್ಳಿಹಳ್ಳಿ, ಪದಾಧಿಕಾರಿಗಳಾದ ಉಮೇಶ ಕಳಕಪ್ಪನವರ್, ಪರಶುರಾಮ್ ಈಳಿಗೇರ, ರಾಘವೇಂದ್ರ ರೇವಣಕರ್, ಅಬ್ದುಲರೆಹೆಮಾನ ಬಿಜಾಪುರಿ, ಮಾಂತೇಶ ಕುಲಕರ್ಣಿ, ನರಸಿಂಹ ನಾಮಾವಳಿ, ಸಿ.ಟಿ ಬುಶೆಟ್ಟಿ, ಗದಿಗೆಪ್ಪ ಬಾರ್ಕಿ, ಜಗದೀಶ ಸಾಲಿಮಠ, ಪುಟ್ಟಪ್ಪ ತಿಮ್ಮಣ್ಣನವರ್, ಬಸನಗೌಡ ಪಾಟೀಲ ಸೇರಿದಂತೆ ಹಲವಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications