ಹಣ್ಣು ತಿಂದವರು ಎಸ್ಕೇಪ್, ಸಿಪ್ಪೆ ತಿಂದವರು ಸಿಕ್ಕಿಬಿದ್ರು

ಓಎಂಸಿಗೆ ಗಣಿ ಗುತ್ತಿಗೆ ಪರವಾನಗಿ ನೀಡುವಾಗ ನಿಯಮಗಳನ್ನು ಉಲ್ಲಂಘಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಶ್ರೀಲಕ್ಷ್ಮಿ, ಹಾಲಿ ಗೃಹ ಸಚಿವೆ ಸಬಿತಾ ಹಾಗೂ ಗಣಿ ಮತ್ತು ಭೂಗರ್ಭ ಇಲಾಖೆಯ ಮಾಜಿ ನಿರ್ದೇಶಕ ವಿ.ಡಿ. ರಾಜಗೋಪಾಲ್ ಅವರನ್ನು ಸಿಬಿಐ ತನಿಖೆಗೆ ಒಳಪಡಿಸಲಾಗಿತ್ತು. ಆದರೆ, ಸಬಿತಾ ಅವರನ್ನು ಬಿಟ್ಟು ಉಳಿದ ಇಬ್ಬರನ್ನು ಸಿಬಿಐ ಬಂಧಿಸಿದೆ.
2004ರಿಂದ 2009ರವರೆಗೆ ಮಾಜಿ ಮುಖ್ಯಮಂತ್ರಿ ದಿವಂಗತ ವೈ.ಎಸ್. ರಾಜಶೇಖರ ರೆಡ್ಡಿಯವರ ಸಂಪುಟದಲ್ಲಿ ಸಬಿತಾ ಗಣಿ ಸಚಿವರಾಗಿದ್ದಾಗ, ಓಎಂಸಿಗೆ ಕಬ್ಬಿಣದ ಅದಿರಿನ ಗಣಿಗಾರಿಕೆ ನಡೆಸಲು ಅನುಮತಿ ನೀಡಲಾಗಿತ್ತು. ಈ ಅವಧಿಯಲ್ಲಿ ಗಣಿ ಕಾರ್ಯದರ್ಶಿಯಾಗಿದ್ದ ಐಎಎಸ್ ಅಧಿಕಾರಿ ಶ್ರೀಲಕ್ಷ್ಮೀ ಅವರು ಸಬಿತಾ ಅವರ ಒಪ್ಪಿಗೆ ಸಿಕ್ಕ ಮೇಲೆ ಸರ್ಕಾರಿ ಆದೇಶಕ್ಕೆ ಸಹಿ ಹಾಕಿದ್ದರು.
'ನನಗೆ ಗಣಿಗಾರಿಕೆ ಸಂಬಂಧಿಸಿದ ಕಾನೂನು, ವಿಧೇಯಕಗಳೇನು ಗೊತ್ತಿಲ್ಲ. ಅಧಿಕಾರಿಗಳು ಹೇಳಿದಂತೆ ಗಣಿ ಲೈಸನ್ ನೀಡುವ ಸರ್ಕಾರಿ ಆದೇಶಕ್ಕೆ ಸಹಿ ಹಾಕಿದ್ದೆ ಅಷ್ಟೇ' ಎಂದು ಸಬಿತಾ ತಮ್ಮ ಮುಗ್ಧತೆಯ ಪ್ರದರ್ಶನ ಮಾಡಿದ್ದಾರೆ.
ಆದರೆ, ಕಾನೂನು ಬಗ್ಗೆ ಅರಿವಿಲ್ಲ ಎಂದು ಹೇಳಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅಜ್ಞಾನದ ನೆಪವೊಡ್ಡಿರುವ ಸಬಿತಾ ಕಾನೂನಿನ ಕೈಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎನ್ನಲಾಗಿದೆ. ಆದರೆ, ಆಕೆ ಈಗಿರುವ ಸ್ಥಾನಮಾನ, ಜಾತಿ ಲೆಕ್ಕಾಚಾರದಿಂದ ಸಿಬಿಐ ಕೂಡಾ ಕೈ ಕಟ್ಟಿ ಕೊಂಡು ಸುಮ್ಮನೆ ನಿಲ್ಲುವಂತಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications