ಅನೈತಿಕ ಸಂಬಂಧ : ಗಂಡಸಿಗಷ್ಟೇ ಶಿಕ್ಷೆಯೇಕೆ? ಸುಪ್ರೀಂ

ಈ ಪ್ರಶ್ನೆಗಳನ್ನು ಸುಪ್ರೀಂ ಕೋರ್ಟ್ ತನ್ನನ್ನು ತಾನೇ ಕೇಳಿಕೊಂಡಿದೆ. ಹಾಗೆಯೆ, ಅನೈತಿಕ ಸಂಬಂಧ ಮಾಡಿದ ಗಂಡಸನ್ನು ಮಾತ್ರ ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸುವ ಭಾರತೀಯ ದಂಡ ಸಂಹಿತೆಯ 497 ಸೆಕ್ಷನ್ ನಲ್ಲಿನ ನಿಯಮವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಈ ನಿಯಮ ಮಹಿಳಾ ಪರವಾಗಿದೆ. ತಪ್ಪು ಮಾಡಿದ ಹೆಂಗಸರನ್ನು ಆರೋಪದ ಕೊಂಡಿಯಿಂದ ಕಳಚುವಂತೆ ಮಾಡುತ್ತದೆ. ಗಂಡಸರಿಗೆ ಇದರಿಂದ ಅನ್ಯಾಯವಾಗುತ್ತಿದೆ ಎಂದು ಪ್ರಕರಣವೊಂದರಲ್ಲಿ ನ್ಯಾ. ಅಫ್ತಾಬ್ ಆಲಂ ಮತ್ತು ನ್ಯಾ. ಆರ್ ಎಂ ಲೋಧಾ ಅವರು ಈ ಪ್ರಶ್ನೆಗಳನ್ನು ಎತ್ತಿದ್ದಾರೆ.
ಐಪಿಸಿ ಸೆಕ್ಷನ್ ಏನು ಹೇಳುತ್ತದೆ : "ಯಾವುದಾದರೂ ಮಹಿಳೆ ಇನ್ನೊಬ್ಬರ ಹೆಂಡತಿ ಎಂದು ಗೊತ್ತಿದ್ದೂ, ಆತನ ಅನುಮತಿಯಿಲ್ಲದೆ ಆ ಮಹಿಳೆಯೊಂದಿಗೆ ಸಂಭೋಗ ನಡೆಸಿದರೆ, ಅದು ಅತ್ಯಾಚಾರವಾಗುವುದಿಲ್ಲ, ಆದರೆ ಅನೈತಿಕ ಸಂಬಂಧವಾಗುತ್ತದೆ. ಅಂಥ ಅಪರಾಧಕ್ಕೆ 5 ವರ್ಷವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡೂ ವಿಧಿಸಲಾಗುತ್ತದೆ. ಲೈಂಗಿಕ ಕ್ರಿಯೆ ನಡೆಸಿದ ಮಹಿಳೆಯನ್ನು ಶಿಕ್ಷಿಸಬಾರದು."
ಇದು ಯಾವ ನ್ಯಾಯ ಸ್ವಾಮಿ ಎಂದು ದೇಶದ ಸರ್ವೋಚ್ಚ ನ್ಯಾಯಾಲಯದ ಪೀಠದ ಮೇಲೆ ಕುಳಿತಿರುವ ಇಬ್ಬರು ನ್ಯಾಯಮೂರ್ತಿಗಳೇ ಪ್ರಶ್ನೆ ಎತ್ತಿದ್ದಾರೆ. ಏನು ಹೇಳುತ್ತೀರಿ ಇದಕ್ಕೆ?
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications