ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಣಿ ಅಕ್ರಮ : ರೆಡ್ಡಿಗಳ ವಿರುದ್ಧ ಸಿಬಿಐ ಚಾರ್ಜ್ ಶೀಟ್

By Prasad
|
Google Oneindia Kannada News

CBI files charge sheet against Janardhana Reddy and others
ಹೈದರಾಬಾದ್, ಡಿ. 3 : ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಓಬಳಾಪುರಂ ಮೈನಿಂಗ್ ಕಂಪನಿಯ ಮಾಲಿಕ, ಕರ್ನಾಟಕದ ಮಾಜಿ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ ಮೂವರು ಮತ್ತು ಕಂಪನಿಯ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಸಿಬಿಐ ಶನಿವಾರ ಆರೋಪ ಪಟ್ಟಿ ಸಲ್ಲಿಸಿದೆ.

ಜನಾರ್ದನ ರೆಡ್ಡಿ ಹೊರತುಪಡಿಸಿ, ಅವರ ಸಂಬಂಧಿ ಓಬಳಾಪುರಂ ಮೈನಿಂಗ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಶ್ರೀನಿವಾಸ ರೆಡ್ಡಿ, ಆಂಧ್ರದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಾಜಿ ನಿರ್ದೇಶಕ ವಿ.ಡಿ. ರಾಜಗೋಪಾಲ್ ಮತ್ತು ಓಬಳಾಪುರಂ ಕಂಪನಿಯ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಸಿಬಿಐ ಜಂಟಿ ನಿರ್ದೇಶಕ (ಹೈದರಾಬಾದ್) ವಿ.ವಿ. ಲಕ್ಷ್ಮಿ ನಾರಾಯಣ ಅವರು ತಿಳಿಸಿದರು.

ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿರುವ ಜನಾರ್ದನ ರೆಡ್ಡಿ, ಶ್ರೀನಿವಾಸ ರೆಡ್ಡಿಯವರನ್ನು ಬಳ್ಳಾರಿಯಲ್ಲಿ ಸೆಪ್ಟೆಂಬರ್ 5ರಂದು ಬಂಧಿಸಲಾಗಿತ್ತು. ನಂತರ ರಾಜಗೋಪಾಲ್ ಅವರನ್ನೂ ಸಿಬಿಐ ಬಂಧಿಸಿತ್ತು. ಮೂವರೂ ಈಗ ಚಂಚಲಗುಡ ಜೈಲಿನಲ್ಲಿ ಕೈದಿಗಗಳಾಗಿದ್ದಾರೆ.

ಅವರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120-ಬಿ (ಸಂಚು), 409 (ಸಾರ್ವಜನಿಕ ನಂಬಿಕೆ ದ್ರೋಹ), 420 (ಮೋಸ), 468 (ಮೋಸ ಮಾಡಲು ನಕಲಿ ಸಹಿ) ಮತ್ತು 471 ಸೆಕ್ಷನ್ (ನಕಲಿ ದಾಖಲೆಯನ್ನು ಬಳಸಿದ್ದು) ಅಡಿಯಲ್ಲಿ ಆರೋಪ ಪಟ್ಟಿ ಸಲ್ಲಿಸಲಾಗಿದೆ.

English summary
Central Bureau of Investigation (Hyderabad zone) filed charge sheet against Obalapuram Mining Company, Janardhana Reddy, BV Srinivas Reddy and VD Rajagopal on Saturday before special court. All the three have been lodged in Chanchalguda central jail in Hyderabad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X