ಯಡಿಯೂರಪ್ಪಗೆ ಸುಪ್ರೀಂ ನಿರಾಳ; ಬಾಷಾ ಅರ್ಜಿ ವಜಾ

ಸಿರಾಜಿನ್ ಬಾಷಾ ಪರ ಸುಪ್ರೀಂಕೋರ್ಟ್ನ ಹಿರಿಯ ವಕೀಲ ಗೋಪಾಲ ಸುಬ್ರಮಣ್ಯನ್ ವಾದ ಮಂಡಿಸಿದರು. ವಾದವನ್ನು ಆಲಿಸಿದ ನ್ಯಾಯಾಲಯ ಕರ್ನಾಟಕ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಜಾಮೀನು ನೀಡಿರುವುದು ಸರಿಯಾಗಿದೆ ಎಂದು ಸ್ಪಷ್ಟವಾಗಿ ಹೇಳುತ್ತಾ, ಬಾಷಾ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿತು. ಇದರಿಂದ ಬಾಷಾ ಹೋರಾಟಕ್ಕೆ ತೀವ್ರ ಹಿನ್ನಡೆಯಾಗಿದೆ.
ಬೆಂಗಳೂರು ಲೋಕಾಯುಕ್ತ ನ್ಯಾಯಾಲಯ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರು ಭಾಗಿಯಾಗಿದ್ದಾರೆ ಎನ್ನಲಾದ ಭೂ ಹಗರಣ ಕುರಿತು ವಿಚಾರಣೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಬಂಧಿತರಾಗಿ 24 ದಿನ ಸೆರೆವಾಸ ಅನುಭವಿಸಿದ ಮಾಜಿ ಮುಖ್ಯಮಂತ್ರಿ ಹೈಕೋರ್ಟ್ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ.












Click it and Unblock the Notifications