ಉಗ್ರರ ಭೀತಿ: ಕೆಎಸ್ಆರ್ ಟಿಸಿ ಬಸ್ ಗೆ ಬಂತು ಸಿಸಿಟಿವಿ

ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರ ವಿಭಾಗೀಯ ಕಚೇರಿಯಲ್ಲಿ ಈ ಸಂಬಂಧ ಉನ್ನತ ಅಧಿಕಾರಿಗಳು ಸಭೆ ನಡೆಸಿ, ನೆರೆ ರಾಜ್ಯಗಳಿಗೆ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್ಗಳಿಗೆ ಸಿ.ಸಿ. ಕ್ಯಾಮರಾ ಅಳವಡಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ.
ಕರ್ನಾಟಕ-ತಮಿಳುನಾಡು-ಕೇರಳ ರಾಜ್ಯಗಳ ಸಂಪರ್ಕ ಕೊಂಡಿಯಾಗಿರುವ ಚಾಮರಾಜನಗರ ಜಿಲ್ಲೆಯ ಬಸ್ ಗಳಿಗೆ ಸಿಸಿ ಕ್ಯಾಮೆರಾ ಅಳವಡಿಸುವುದರಿಂದ ಪ್ರಯಾಣಿಕರ ಮೇಲೆ ನಿಗಾ ಇಡಲು ಸಹಕಾರಿಯಾಗುತ್ತದೆ.
ಉಗ್ರಗಾಮಿಗಳ ನುಸುಳುವಿಕೆ ಮುನ್ಸೂಚನೆ ಅಲ್ಲದೆ ಅಕ್ರಮ ಚಟುವಟಿಕೆಗಳಿಗೂ ಕಡಿವಾಣ ಹಾಕಬಹುದಾಗಿದೆ. ಈ ಬಗ್ಗೆ ಪ್ರಸ್ತಾವನೆಯನ್ನು ಸಾರಿಗೆ ಸಚಿವ ಆರ್ ಅಶೋಕ್ ಅವರಿಗೆ ಕಳುಹಿಸಲಾಗಿದೆ. ಸಾರಿಗೆ ಸಚಿವಾಲಯದಿಂದ ಒಪ್ಪಿಗೆ ಸಿಕ್ಕ ನಂತರ ಈ ಯೋಜನೆ ಕಾರ್ಯಗತವಾಗಲಿದೆ ಎಂದು ಕೆಎಸ್ ಆರ್ ಟಿಸಿ ಅಧಿಕಾರಿಗಳು ಹೇಳಿದ್ದಾರೆ.











Click it and Unblock the Notifications