ಯುರೇನಿಯಂ ಭೂಮಿಯಲ್ಲಿನ ಬ್ರಹ್ಮರಾಕ್ಷಸ: ನಾಗೇಶ್ ಹೆಗಡೆ

ಗಣಿಗಾರಿಕೆಯ ವಿಕೃತ ರೂಪವೇ ಯುರೇನಿಯಂ. ದೇಶದಲ್ಲಿ ಪರಮಾಣು ಶಕ್ತಿಯಿಂದ ವಿದ್ಯುತ್ ಉತ್ಪಾದಿಸಬೇಕು ಎಂಬ ಹೋಮಿ ಜಹಾಂಗಿರ್ ಬಾಬಾ ಅವರ ಚಿಂತನೆಯಿಂದಾಗಿ ಮುಂಬೈ ಸಮೀಪ ಟ್ರಾಂಬೆಯಲ್ಲಿ ಏಷ್ಯದ ಮೊದಲ ಅಣುಸ್ಥಾವರ ಅಪ್ಸರಾ ಆರಂಭವಾಯಿತು. ಆಗ ಯುರೇನಿಯಂ ಅದಿರನ್ನು ಜಾದುಗುಡದಿಂದ ತರಲಾಗುತ್ತಿತ್ತು. ಆಗ ಮಹಿಳೆಯರ ಗರ್ಭದಲ್ಲಿ ವಿಕೃತ ಶಿಶುಗಳು ಜನಿಸತೊಡಗಿದವು. ಇದಕ್ಕೆ ಕಾರಣ ಯುರೇನಿಯಂ ಗಣಿಗಾರಿಕೆ ಎಂದು ಅವರು ಯುರೇನಿಯಂ ಬಳಕೆಯ ವಿಕೃತರೂಪವನ್ನು ತೆರೆದಿಟ್ಟರು.
ಗಣಿಗಾರಿಕೆಯ ಮೂಲಕ ಒಂದು ಕ್ವಿಂಟಾಲ್ ಕಲ್ಲಿನ ಕಚ್ಚಾಸಾಮಗ್ರಿಯಲ್ಲಿ ಕೇವಲ 170 ಗ್ರಾಂ ಮಾತ್ರ ಯುರೇನಿಯಂ ದೊರೆಯುತ್ತದೆ. ಇದರಲ್ಲಿ ರೆಡಾನ್ ಎನ್ನುವ ಗ್ಯಾಸ್ ಉತ್ಪತ್ತಿಯಾಗಿ ಗಾಳಿ, ನೀರಿನಲ್ಲಿ ಸಂಗ್ರಹವಾಗಿ ಶ್ವಾಸಕೋಶ ಕ್ಯಾನ್ಸರ್ಗೆ ಕಾರಣವಾಗುತ್ತದೆ. ಇಂತಹ ಗ್ಯಾಸ್ನಿಂದಾಗಿ ಅಮೆರಿಕಾ ದೇಶದಲ್ಲಿ ಪ್ರತಿ ವರ್ಷ 21 ಸಾವಿರ ಜನ ಸಾವಿಗೀಡಾಗುತ್ತಿದ್ದಾರೆ. ಇದು ಗೋಗಿಯಲ್ಲಿಯೂ ಸಂಭವಿಸಬಹುದು ಎಂಬ ಎಚ್ಚರಿಕೆಯ ಮಾತನ್ನು ಹೆಗಡೆ ಹೇಳಿದರು.
ಗಣಿಗಾರಿಕೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಶೇ.70ರಷ್ಟು ಕಾರ್ಮಿಕರು ಶ್ವಾಸಕೋಶ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಯುರೇನಿಯಂ ಗಣಿಗಾರಿಕೆಯಿಂದ ಬದುಕಿನ ಹಕ್ಕು ಕಸಿದುಕೊಳ್ಳುವ ಅಪಾಯವಂತೂ ಗ್ಯಾರಂಟಿ. ಜಿಲ್ಲೆಯ ಗೋಗಿಯಲ್ಲಿ ಸದ್ದುಗದ್ದಲವಿಲ್ಲದೆ ಎಂಟು ವರ್ಷಗಳಿಂದ ಗಣಿಗಾರಿಕೆಯ ಪರೀಕ್ಷೆ ನಡೆಯುತ್ತಿದ್ದು ಈಗಾಗಲೇ ಗ್ರಾಮಸ್ಥರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಅಧಿಕಾರಿಗಳು ಕಂಪನಿಯ ಪರ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಜಾದುಗುಡದಲ್ಲಿ ಆದಂತಹ ಅನಾಹುತಗಳು ಇಲ್ಲಿ ಸಂಭವಿಸಬಾರದು ಎಂದಾದರೆ ಎಲ್ಲರೂ ಒಂದಾಗಿ, ಗೋಗಿಯಲ್ಲಿ ನಡೆಯುವ ಯುರೇನಿಯಂ ಗಣಿಗಾರಿಕೆಯನ್ನು ಕಾನೂನಿನ ಚೌಕಟ್ಟಿನಲ್ಲಿ ತಡೆಯಲು ಪಣತೊಡಬೇಕೆಂದು ನಾಗೇಶ್ ಹೆಗಡೆ ಜನತೆಗೆ ಕರೆ ನೀಡಿದರು. ಇಂತಹ ಅಕ್ರಮ ಗಣಿಗಾರಿಕೆ ತಡೆದರೆ ರಾಷ್ಟ್ರ ರಕ್ಷಿಸಿದಂತೆ ಎಂದು ಅವರು ಹೇಳಿದರು. ಇವರ ಜೋತೆ ಡಾ.ಗುರುರಾಜ ಅರಿಕೇರಿ, ಡಾ.ಬಸವರಾಜ ಇಜೇರಿ, ಭಾಸ್ಕರರಾವ್ ಮೂಡಬೂಳ ಇದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications