Get Updates
Get notified of breaking news, exclusive insights, and must-see stories!

ಲೋಕಾಯುಕ್ತ : ವಿಳಂಬಕ್ಕೆ ರಾಜ್ಯಪಾಲರೇ ಹೊಣೆ, ಡಿವಿಎಸ್

DVS blames Governor
ಬೆಂಗಳೂರು, ಡಿ. 7 : ನೂತನ ಲೋಕಾಯುಕ್ತ ನೇಮಕಾತಿಗೆ ಆಗುತ್ತಿರುವ ವಿಳಂಬಕ್ಕೆ ರಾಜ್ಯಪಾಲ ಎಚ್ಆರ್ ಭಾರದ್ವಾಜ್ ಅವರನ್ನೇ ಹೊಣೆಗಾರರನ್ನಾಗಿ ಮಾಡಿರುವ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ, ಲೋಕಾಯುಕ್ತ ನೇಮಕಕ್ಕೆ ಎಲ್ಲ ವಿಧಿವಿಧಾನಗಳನ್ನು ಸರಕಾರ ಅನುಸರಿಸಿದೆ. ಅವರನ್ನು ನೇಮಕ ಮಾಡುವ ಹೊಣೆಗಾರಿಕೆ ರಾಜ್ಯಪಾಲರ ಮೇಲಿದೆ ಎಂದಿದ್ದಾರೆ.

ಲೋಕಾಯುಕ್ತರನ್ನು ನೇಮಕ ಮಾಡುವಲ್ಲಿ ಸರಕಾರ ಬೇಕಂತಲೇ ವಿಳಂಬ ನೀತಿಯನ್ನು ಅನುಸರಿಸುತ್ತಿದೆ ಎಂದು ಜಾತ್ಯತೀತ ಜನತಾದಳದ ನಾಯಕ ಎಚ್ ಡಿ ರೇವಣ್ಣ ಅವರು ಆರೋಪಿಸಿದ್ದಕ್ಕೆ ಉತ್ತರಿಸುತ್ತಿದ್ದ ಮುಖ್ಯಮಂತ್ರಿ, ಸದ್ಯಕ್ಕೆ ಚೆಂಡು ರಾಜ್ಯಪಾಲರ ಅಂಗಳದಲ್ಲಿದೆ ಎಂದು ಸದನಕ್ಕೆ ತಿಳಿಸಿದರು.

ನ್ಯಾ.ಸಂತೋಷ್ ಹೆಗ್ಡೆ ನಿವೃತ್ತರಾದ ನಂತರ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಶಿವರಾಜ ಪಾಟೀಲ ಅವರನ್ನು ಲೋಕಾಯುಕ್ತರನ್ನಾಗಿ ನೇಮಿಸಲಾಗಿತ್ತು. ಆದರೆ, ಅವರ ಮೇಲೆಯೂ ಅಕ್ರಮ ನಿವೇಶನ ಕಬಳಿಕೆಯ ಆರೋಪ ಬಂದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 19ರಂದು ಅವರೂ ರಾಜೀನಾಮೆ ನೀಡಿದ್ದರು. ತದನಂತರ ಸ್ಥಾನ ತೆರವಾಗಿಯೇ ಇದೆ.

ಸದಾನಂದ ಗೌಡರ ಹೇಳಿಕೆ ಪ್ರತಿಕ್ರಿಯಿಸಿರುವ ರಾಜ್ಯಪಾಲರು, ಸರಕಾರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದೇನೆ. ಸರಕಾರ ಮತ್ತು ಮಾಧ್ಯಮಗಳು ನಂಬಿಕೆಯಿರುವ ನಿಷ್ಕಳಂಕ ವ್ಯಕ್ತಿತ್ವದ ವ್ಯಕ್ತಿಯನ್ನು ಶಿಫಾರಸು ಮಾಡಿದರು ಕ್ಷಣಾರ್ಧದಲ್ಲಿ ಅಂಕಿತ ಹಾಕುತ್ತೇನೆ. ಆದರೆ, ಅಧಿವೇಶನ ನಡೆಯುತ್ತಿರುವುದರಿಂದ ಇದಕ್ಕೆ ಹೆಚ್ಚು ಒತ್ತು ನೀಡುತ್ತಿಲ್ಲ ಎಂದಿದ್ದಾರೆ.

ನ್ಯಾ. ಶಿವರಾಜ ಪಾಟೀಲರ ರಾಜೀನಾಮೆಯ ನಂತರ ಕೇರಳ ಹೈಕೋರ್ಟಿನ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೆಸರನ್ನು ಸರಕಾರ ಲೋಕಾಯುಕ್ತ ಹುದ್ದೆಗೆ ಶಿಫಾರಸು ಮಾಡಿದೆ. ಆದರೆ, ಅವರ ಮೇಲೆ ಕೂಡ ಜ್ಯುಡಿಷಿಯಲ್ ಲೇಔಟಲ್ಲಿ ಸಾರ್ವಜನಿಕ ಸ್ವತ್ತನ್ನು ತಮ್ಮದಾಗಿಸಿಕೊಂಡಿರುವ ಆರೋಪ ಬಂದ ಹಿನ್ನೆಲೆ ಅವರ ನೇಮಕಾತಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದರು. ಈ ವಿಷಯ ಸದನದಲ್ಲಿ ಇಂದು ಭಾರೀ ಜಟಾಪಟಿಗೆ ಕಾರಣವಾಯಿತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+