ಹಳ್ಳಿಯಲ್ಲಿಯೂ ಕನ್ನಡದ ಬುಡ ಅಲ್ಲಾಡುತ್ತಿದೆ : ಸಿಪಿಕೆ

ಮೂರು ದಿನಗಳ ಕನ್ನಡ ಸಾಹಿತ್ಯ ಸಮ್ಮೇಳನ ಇಂದು ಅದ್ಧೂರಿಯಾಗಿ ಆರಂಭಗೊಂಡರೂ ಕನ್ನಡ ಶಾಲೆ ಮುಚ್ಚಬಾರದೆಂದು ಆಗ್ರಹಿಸಿದ ಕನ್ನಡಿಗರ ಮೇಲೆ ನಡೆದ ಲಾಠಿ ಪ್ರಹಾರ, ಪುಸ್ತಕ ಮಳಿಗೆಗಳಲ್ಲಿ ಕಂಡ ಅವ್ಯವಸ್ಥೆ ಸಾಹಿತ್ಯ ಸಮ್ಮೇಳನಕ್ಕೆ ಮೊದಲ ದಿನವೇ ಕಪ್ಪುಚುಕ್ಕೆಯನ್ನಿಟ್ಟಿವೆ. ಪುಂಖಾನುಪುಂಖವಾಗಿ ಬರುತ್ತಿರುವ ದೂರುಗಳು ಗಂಗಾವತಿಯಲ್ಲಿ ವಿವಾದದ ಧೂಳೆಬ್ಬಿಸಿವೆ.
ಕನ್ನಡ ಶಾಲೆ ಮುಚ್ಚಬೇಡಿ : ಶಾಲೆಯಲ್ಲಿ ಒಬ್ಬೇ ಒಬ್ಬ ವಿದ್ಯಾರ್ಥಿಯಿದ್ದರೂ ಸರಕಾರ ಕನ್ನಡ ಶಾಲೆ ನಡೆಸಬೇಕು, ಕನ್ನಡ ಶಾಲೆಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಷೋಷಿಸಿದ ಮೈಸೂರು ಮೂಲದ ಸಾಹಿತಿ, ವಿಮರ್ಷಕ ಸಿಪಿ ಕೃಷ್ಣಕುಮಾರ್ ಅವರು, ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಲಾಠಿ ಏಟು ತಿಂದ ಕನ್ನಡ ಹೋರಾಟಗಾರರ ಗಾಯಕ್ಕೆ ಮುಲಾಮು ಹಚ್ಚಿದರು ಮತ್ತು ನೆರೆದಿದ್ದ ಸಾವಿರಾರು ಕನ್ನಡಿಗರ ಚಪ್ಪಾಳೆ ಗಿಟ್ಟಿಸಿದರು.
ಇಂಗ್ಲಿಷ್ ಗುಲಾಮಗಿರಿಯ ಸಂಕೇತ : ಕನ್ನಡ ಒಂದು ಭಾಷೆಯಷ್ಟೇ ಅಲ್ಲ, ಅದು ಒಂದು ಸಂಸ್ಕೃತಿ. ಇಂಗ್ಲಿಷ್ ಭಾಷೆ ಗೊತ್ತಿಲ್ಲ ಅಂತ ಕನ್ನಡಿಗರು ಕೀಳರಿಮೆ ಅನುಭವಿಸಬಾರದು. ಗುಲಾಮಗಿರಿಯ ಸಂಕೇತವಾಗಿರುವ ಇಂಗ್ಲಿಷನ್ನು ತ್ಯಜಿಸಿ ಕನ್ನಡವನ್ನು ಆಡಳಿತದಲ್ಲಿ ಅನುಷ್ಠಾನಕ್ಕೆ ತರಬೇಕು ಎಂದು ಅವರು ಸರಕಾರಕ್ಕೆ ಕಿವಿಮಾತು ಹೇಳಿದರು. ಹಾಗೆಯೆ, ಕನ್ನಡವನ್ನು ಅವಮಾನಿಸುತ್ತಿರುವ ಮರಾಠಿಗರ ಪುಂಡಾಟಿಗೆ ಕೊನೆ ಹಾಡಬೇಕು ಎಂದು ಅವರು ಕರೆ ನೀಡಿದರು.
ಅವ್ಯವಸ್ಥೆಯ ಆಗರ : ಅಚ್ಚುಕಟ್ಟಾಗಿ ಮಾಡಿದ ವ್ಯವಸ್ಥೆ ಏರುಪೇರಾಗದಿದ್ದರೆ ಕನ್ನಡ ಸಮ್ಮೇಳನವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಸಮ್ಮೇಳನಗಳಲ್ಲಿ ಅವ್ಯವಸ್ಥೆಗಳು ಹಾಸುಹೊಕ್ಕಾಗಿರುತ್ತವೆ. ಪ್ರತಿಬಾರಿ ಹದಗೆಡುವ ಊಟದ ವ್ಯವಸ್ಥೆ ಇಲ್ಲಿ ಉತ್ತಮವಾಗಿದ್ದರೆ, ಪುಸ್ತಕ ಮಳಿಗೆಗಳಲ್ಲಿ ಮಾಡಿರುವ ಅವ್ಯವಸ್ಥೆ ವಿವಾದದ ಧೂಳೆಬ್ಬಿಸಿದೆ. ಪುಸ್ತಕ ಕೊಳ್ಳಲೆಂದು ಹೋದ ಕನ್ನಡಿಗರಿಗೆ ದಕ್ಕಿದ್ದು ಧೂಳಿನ ಉಡುಗೊರೆ.
ನೆಲಹಾಸು ಹಾಸಿರದ ಕಾರಣ ಮಳಿಗೆಯೆಲ್ಲ ಧೂಳುಮಯವಾಗಿತ್ತು. ಪೆಂಡಾಲು ಸರಿಯಾಗಿ ಹಾಕಿಲ್ಲ, ಕುರ್ಚಿ ಟೇಬಲ್ಲಿನ ವ್ಯವಸ್ಥೆ ಸರಿಯಾಗಿ ಮಾಡಿಲ್ಲ. ನಿಗದಿಪಡಿಸಿದಷ್ಟು ದುಡ್ಡು ಕೊಟ್ಟರೂ ವ್ಯವಸ್ಥೆ ಏನೂ ಚೆನ್ನಾಗಿಲ್ಲ ಎಂದು ಪುಸ್ತಕ ಮಳಿಗೆಯಿಟ್ಟ ಹೆಸರಾಂತ ಲೇಖಕರೊಬ್ಬರು ದೂರಿದ್ದಾರೆ. ಮತ್ತೊಬ್ಬ ಹಿರಿಯರು, ಸುಮಾರು 20 ಸಮ್ಮೇಳನಗಳನ್ನು ನೋಡಿದ್ದೇನೆ. ಇಂಥ ಅವ್ಯವಸ್ಥೆ ಎಲ್ಲೂ ನೋಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications