ಹಳ್ಳಿಯಲ್ಲಿಯೂ ಕನ್ನಡದ ಬುಡ ಅಲ್ಲಾಡುತ್ತಿದೆ : ಸಿಪಿಕೆ

ಮೂರು ದಿನಗಳ ಕನ್ನಡ ಸಾಹಿತ್ಯ ಸಮ್ಮೇಳನ ಇಂದು ಅದ್ಧೂರಿಯಾಗಿ ಆರಂಭಗೊಂಡರೂ ಕನ್ನಡ ಶಾಲೆ ಮುಚ್ಚಬಾರದೆಂದು ಆಗ್ರಹಿಸಿದ ಕನ್ನಡಿಗರ ಮೇಲೆ ನಡೆದ ಲಾಠಿ ಪ್ರಹಾರ, ಪುಸ್ತಕ ಮಳಿಗೆಗಳಲ್ಲಿ ಕಂಡ ಅವ್ಯವಸ್ಥೆ ಸಾಹಿತ್ಯ ಸಮ್ಮೇಳನಕ್ಕೆ ಮೊದಲ ದಿನವೇ ಕಪ್ಪುಚುಕ್ಕೆಯನ್ನಿಟ್ಟಿವೆ. ಪುಂಖಾನುಪುಂಖವಾಗಿ ಬರುತ್ತಿರುವ ದೂರುಗಳು ಗಂಗಾವತಿಯಲ್ಲಿ ವಿವಾದದ ಧೂಳೆಬ್ಬಿಸಿವೆ.
ಕನ್ನಡ ಶಾಲೆ ಮುಚ್ಚಬೇಡಿ : ಶಾಲೆಯಲ್ಲಿ ಒಬ್ಬೇ ಒಬ್ಬ ವಿದ್ಯಾರ್ಥಿಯಿದ್ದರೂ ಸರಕಾರ ಕನ್ನಡ ಶಾಲೆ ನಡೆಸಬೇಕು, ಕನ್ನಡ ಶಾಲೆಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಷೋಷಿಸಿದ ಮೈಸೂರು ಮೂಲದ ಸಾಹಿತಿ, ವಿಮರ್ಷಕ ಸಿಪಿ ಕೃಷ್ಣಕುಮಾರ್ ಅವರು, ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಲಾಠಿ ಏಟು ತಿಂದ ಕನ್ನಡ ಹೋರಾಟಗಾರರ ಗಾಯಕ್ಕೆ ಮುಲಾಮು ಹಚ್ಚಿದರು ಮತ್ತು ನೆರೆದಿದ್ದ ಸಾವಿರಾರು ಕನ್ನಡಿಗರ ಚಪ್ಪಾಳೆ ಗಿಟ್ಟಿಸಿದರು.
ಇಂಗ್ಲಿಷ್ ಗುಲಾಮಗಿರಿಯ ಸಂಕೇತ : ಕನ್ನಡ ಒಂದು ಭಾಷೆಯಷ್ಟೇ ಅಲ್ಲ, ಅದು ಒಂದು ಸಂಸ್ಕೃತಿ. ಇಂಗ್ಲಿಷ್ ಭಾಷೆ ಗೊತ್ತಿಲ್ಲ ಅಂತ ಕನ್ನಡಿಗರು ಕೀಳರಿಮೆ ಅನುಭವಿಸಬಾರದು. ಗುಲಾಮಗಿರಿಯ ಸಂಕೇತವಾಗಿರುವ ಇಂಗ್ಲಿಷನ್ನು ತ್ಯಜಿಸಿ ಕನ್ನಡವನ್ನು ಆಡಳಿತದಲ್ಲಿ ಅನುಷ್ಠಾನಕ್ಕೆ ತರಬೇಕು ಎಂದು ಅವರು ಸರಕಾರಕ್ಕೆ ಕಿವಿಮಾತು ಹೇಳಿದರು. ಹಾಗೆಯೆ, ಕನ್ನಡವನ್ನು ಅವಮಾನಿಸುತ್ತಿರುವ ಮರಾಠಿಗರ ಪುಂಡಾಟಿಗೆ ಕೊನೆ ಹಾಡಬೇಕು ಎಂದು ಅವರು ಕರೆ ನೀಡಿದರು.
ಅವ್ಯವಸ್ಥೆಯ ಆಗರ : ಅಚ್ಚುಕಟ್ಟಾಗಿ ಮಾಡಿದ ವ್ಯವಸ್ಥೆ ಏರುಪೇರಾಗದಿದ್ದರೆ ಕನ್ನಡ ಸಮ್ಮೇಳನವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಸಮ್ಮೇಳನಗಳಲ್ಲಿ ಅವ್ಯವಸ್ಥೆಗಳು ಹಾಸುಹೊಕ್ಕಾಗಿರುತ್ತವೆ. ಪ್ರತಿಬಾರಿ ಹದಗೆಡುವ ಊಟದ ವ್ಯವಸ್ಥೆ ಇಲ್ಲಿ ಉತ್ತಮವಾಗಿದ್ದರೆ, ಪುಸ್ತಕ ಮಳಿಗೆಗಳಲ್ಲಿ ಮಾಡಿರುವ ಅವ್ಯವಸ್ಥೆ ವಿವಾದದ ಧೂಳೆಬ್ಬಿಸಿದೆ. ಪುಸ್ತಕ ಕೊಳ್ಳಲೆಂದು ಹೋದ ಕನ್ನಡಿಗರಿಗೆ ದಕ್ಕಿದ್ದು ಧೂಳಿನ ಉಡುಗೊರೆ.
ನೆಲಹಾಸು ಹಾಸಿರದ ಕಾರಣ ಮಳಿಗೆಯೆಲ್ಲ ಧೂಳುಮಯವಾಗಿತ್ತು. ಪೆಂಡಾಲು ಸರಿಯಾಗಿ ಹಾಕಿಲ್ಲ, ಕುರ್ಚಿ ಟೇಬಲ್ಲಿನ ವ್ಯವಸ್ಥೆ ಸರಿಯಾಗಿ ಮಾಡಿಲ್ಲ. ನಿಗದಿಪಡಿಸಿದಷ್ಟು ದುಡ್ಡು ಕೊಟ್ಟರೂ ವ್ಯವಸ್ಥೆ ಏನೂ ಚೆನ್ನಾಗಿಲ್ಲ ಎಂದು ಪುಸ್ತಕ ಮಳಿಗೆಯಿಟ್ಟ ಹೆಸರಾಂತ ಲೇಖಕರೊಬ್ಬರು ದೂರಿದ್ದಾರೆ. ಮತ್ತೊಬ್ಬ ಹಿರಿಯರು, ಸುಮಾರು 20 ಸಮ್ಮೇಳನಗಳನ್ನು ನೋಡಿದ್ದೇನೆ. ಇಂಥ ಅವ್ಯವಸ್ಥೆ ಎಲ್ಲೂ ನೋಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications