ಮೇಲ್ಮನೆ : ಡಿವಿಎಸ್ಗೆ ಬಿಎಸ್ವೈ ತೊಡರುಗಾಲು

ಬಲ್ಲ ಮೂಲಗಳ ಪ್ರಕಾರ, ವಿಧಾನ ಪರಿಷತ್ತಿನ ಸ್ಥಾನಕ್ಕೆ ನಾಮಪತ್ರವನ್ನು ಸೋಮವಾರ ಸಲ್ಲಿಸುತ್ತಿರುವ ಸದಾನಂದ ಗೌಡರ ಕಾಲುಕೆಳಗಿನ ಕಾರ್ಪೆಟ್ ಎಳೆಯಲು ಯಡಿಯೂರಪ್ಪನವರು ಎಲ್ಲ ಕಾರ್ಯತಂತ್ರಗಳನ್ನು ಹೂಡುತ್ತಿದ್ದಾರೆ. ನಾಮಪತ್ರ ಸಲ್ಲಿಸದಂತೆ ಡಿವಿಎಸ್ ಗೆ ಕಟ್ಟೆಚ್ಚರಿಕೆಯನ್ನೂ ಬಿಎಸ್ ವೈ ಕೊಟ್ಟಿದ್ದಾರೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ.
ಡಿವಿಎಸ್ ನಾಮಪತ್ರ ಸಲ್ಲಿಸಿ ಜಯಶಾಲಿಯಾದರೆ ಮತ್ತೆ ಮುಖ್ಯಮಂತ್ರಿಯಾಗುವ ಕನಸು ಮಣ್ಣುಗೂಡಿದಂತೆ ಎಂಬುದು ಯಡಿಯೂರಪ್ಪನವರ ಕಳವಳಕ್ಕೆ ಮುಖ್ಯ ಕಾರಣ. ಹೀಗಾಗಿ ಭಾನುವಾರದೊಳಗೆ ವರಿಷ್ಠರಿಗೆ ಮನವೊಲಿಕೆ ಮಾಡಿಕೊಟ್ಟು ಕಣದಿಂದ ಹಿಂದೆ ಸರಿಯುವಂತೆ ಗೌಡರಿಗೆ ಯಡಿಯೂರಪ್ಪ ಎಚ್ಚರಿಕೆ ಕೊಟ್ಟಿದ್ದಾರೆ. ಡಿವಿಎಸ್ ದ್ವಂದ್ವದಲ್ಲಿ ಮುಳುಗಿದ್ದಾರೆ.
2ಜಿ ತರಂಗಗುಚ್ಛ ಹಗರಣದಲ್ಲಿ ಭಾಗಿಯಾಗಿರುವ ಕೇಂದ್ರ ಸಚಿವ ಪಿ ಚಿದಂಬರಂ ಅವರೇ ಸ್ಥಾನ ಕಾಪಾಡಿಕೊಂಡಿರುವಾಗ ತಾವೇಕೆ ಮತ್ತೆ ಮುಖ್ಯಮಂತ್ರಿಯಾಗಬಾರದು ಎಂಬ ವಾದ ಅವರದು. ಕೆಲ ದಿನಗಳ ಹಿಂದೆ, ಗೌಡ, ಈಶ್ವರಪ್ಪ ಮುಂತಾದವರನ್ನು ತಮ್ಮ ನಿವಾಸಕ್ಕೆ ಕರೆಯಿಸಿಕೊಂಡು ತಮ್ಮನ್ನೇ ಮುಖ್ಯಮಂತ್ರಿ ಮಾಡಿದರೆ ಬಿಜೆಪಿಗೆ ಉಳಿಗಾಲ, ಇಲ್ಲದಿದ್ದರೆ ಕೊನೆಗಾಲ ಎಂದು ಎಚ್ಚರಿಕೆ ಅವರು ನೀಡಿದ್ದರು.
ಒಂದೆಡೆ, ಶ್ರೀರಾಮುಲು ಅವರೇ ಸ್ವತಃ ಜೆಡಿಎಸ್ ಮತ್ತು ಕಾಂಗ್ರೆಸ್ ಜೊತೆ ಕೈಜೋಡಿಸಿಕೊಂಡು ಸದಾನಂದ ಗೌಡರನ್ನು ಸೋಲಿಸಲು ತಂತ್ರಗಾರಿಕೆ ನಡೆಸಿರುವಾಗ, ಬಿಜೆಪಿಗೆ ಪಕ್ಷದಲ್ಲಿಯೇ ಅಡತಡೆಗಳು ಎದುರಾಗುತ್ತಿವೆ. ಒಂದು ವೇಳೆ ಗೌಡರು ಯಡಿಯೂರಪ್ಪನನ್ನು ಧಿಕ್ಕರಿಸಿ ನಾಮಪತ್ರಪತ್ರ ಸಲ್ಲಿಸಿದ್ದೇ ಆದಲ್ಲಿ, ಬಳ್ಳಾರಿ ಗ್ರಾಮೀಣ ಉಪಚುನಾವಣೆಯಲ್ಲಿ ಆದ ಮುಖಭಂಗ, ಈ ಬಾರಿ ನೇರವಾಗಿ ಯಡಿಯೂರಪ್ಪನವರ ಮುಖಾಂತರ ಆಗುವುದು ನಿಶ್ಚಿತ ಎಂಬ ಮಾತು ವಿಧಾನಸೌಧದಿಂದ ತೇಲಿ ಬರುತ್ತಿವೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications