ಮೇಲ್ಮನೆ : ಡಿವಿಎಸ್ಗೆ ಬಿಎಸ್ವೈ ತೊಡರುಗಾಲು

ಬಲ್ಲ ಮೂಲಗಳ ಪ್ರಕಾರ, ವಿಧಾನ ಪರಿಷತ್ತಿನ ಸ್ಥಾನಕ್ಕೆ ನಾಮಪತ್ರವನ್ನು ಸೋಮವಾರ ಸಲ್ಲಿಸುತ್ತಿರುವ ಸದಾನಂದ ಗೌಡರ ಕಾಲುಕೆಳಗಿನ ಕಾರ್ಪೆಟ್ ಎಳೆಯಲು ಯಡಿಯೂರಪ್ಪನವರು ಎಲ್ಲ ಕಾರ್ಯತಂತ್ರಗಳನ್ನು ಹೂಡುತ್ತಿದ್ದಾರೆ. ನಾಮಪತ್ರ ಸಲ್ಲಿಸದಂತೆ ಡಿವಿಎಸ್ ಗೆ ಕಟ್ಟೆಚ್ಚರಿಕೆಯನ್ನೂ ಬಿಎಸ್ ವೈ ಕೊಟ್ಟಿದ್ದಾರೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ.
ಡಿವಿಎಸ್ ನಾಮಪತ್ರ ಸಲ್ಲಿಸಿ ಜಯಶಾಲಿಯಾದರೆ ಮತ್ತೆ ಮುಖ್ಯಮಂತ್ರಿಯಾಗುವ ಕನಸು ಮಣ್ಣುಗೂಡಿದಂತೆ ಎಂಬುದು ಯಡಿಯೂರಪ್ಪನವರ ಕಳವಳಕ್ಕೆ ಮುಖ್ಯ ಕಾರಣ. ಹೀಗಾಗಿ ಭಾನುವಾರದೊಳಗೆ ವರಿಷ್ಠರಿಗೆ ಮನವೊಲಿಕೆ ಮಾಡಿಕೊಟ್ಟು ಕಣದಿಂದ ಹಿಂದೆ ಸರಿಯುವಂತೆ ಗೌಡರಿಗೆ ಯಡಿಯೂರಪ್ಪ ಎಚ್ಚರಿಕೆ ಕೊಟ್ಟಿದ್ದಾರೆ. ಡಿವಿಎಸ್ ದ್ವಂದ್ವದಲ್ಲಿ ಮುಳುಗಿದ್ದಾರೆ.
2ಜಿ ತರಂಗಗುಚ್ಛ ಹಗರಣದಲ್ಲಿ ಭಾಗಿಯಾಗಿರುವ ಕೇಂದ್ರ ಸಚಿವ ಪಿ ಚಿದಂಬರಂ ಅವರೇ ಸ್ಥಾನ ಕಾಪಾಡಿಕೊಂಡಿರುವಾಗ ತಾವೇಕೆ ಮತ್ತೆ ಮುಖ್ಯಮಂತ್ರಿಯಾಗಬಾರದು ಎಂಬ ವಾದ ಅವರದು. ಕೆಲ ದಿನಗಳ ಹಿಂದೆ, ಗೌಡ, ಈಶ್ವರಪ್ಪ ಮುಂತಾದವರನ್ನು ತಮ್ಮ ನಿವಾಸಕ್ಕೆ ಕರೆಯಿಸಿಕೊಂಡು ತಮ್ಮನ್ನೇ ಮುಖ್ಯಮಂತ್ರಿ ಮಾಡಿದರೆ ಬಿಜೆಪಿಗೆ ಉಳಿಗಾಲ, ಇಲ್ಲದಿದ್ದರೆ ಕೊನೆಗಾಲ ಎಂದು ಎಚ್ಚರಿಕೆ ಅವರು ನೀಡಿದ್ದರು.
ಒಂದೆಡೆ, ಶ್ರೀರಾಮುಲು ಅವರೇ ಸ್ವತಃ ಜೆಡಿಎಸ್ ಮತ್ತು ಕಾಂಗ್ರೆಸ್ ಜೊತೆ ಕೈಜೋಡಿಸಿಕೊಂಡು ಸದಾನಂದ ಗೌಡರನ್ನು ಸೋಲಿಸಲು ತಂತ್ರಗಾರಿಕೆ ನಡೆಸಿರುವಾಗ, ಬಿಜೆಪಿಗೆ ಪಕ್ಷದಲ್ಲಿಯೇ ಅಡತಡೆಗಳು ಎದುರಾಗುತ್ತಿವೆ. ಒಂದು ವೇಳೆ ಗೌಡರು ಯಡಿಯೂರಪ್ಪನನ್ನು ಧಿಕ್ಕರಿಸಿ ನಾಮಪತ್ರಪತ್ರ ಸಲ್ಲಿಸಿದ್ದೇ ಆದಲ್ಲಿ, ಬಳ್ಳಾರಿ ಗ್ರಾಮೀಣ ಉಪಚುನಾವಣೆಯಲ್ಲಿ ಆದ ಮುಖಭಂಗ, ಈ ಬಾರಿ ನೇರವಾಗಿ ಯಡಿಯೂರಪ್ಪನವರ ಮುಖಾಂತರ ಆಗುವುದು ನಿಶ್ಚಿತ ಎಂಬ ಮಾತು ವಿಧಾನಸೌಧದಿಂದ ತೇಲಿ ಬರುತ್ತಿವೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications