ಶ್ರೀರಾಮುಲು ಸರ್ಕಾರ ಕೆಡವಲು ಸಾಧ್ಯವಿಲ್ಲ: ಶೆಟ್ಟರ್

Jagadish Shettar
ಉಡುಪಿ, ಡಿ.12: ನನ್ನ ಬಳಿ 22 ಶಾಸಕರ ಬೆಂಬಲವಿದೆ. ವಿಪಕ್ಷಗಳ ಸಹಕಾರದಿಂದ ಸರ್ಕಾರ ಉರುಳಿಸಬಲ್ಲೆ ಎಂಬ ಶ್ರೀರಾಮುಲು ಅವರ ಮಾತಿನಲ್ಲಿ ಅರ್ಥವಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲಿ ಸದಾನಂದ ಗೌಡರು ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ.

ಚುನಾವಣೆ ಸಂಬಂಧ ಈಗಾಗಲೇ ವಿಪ್ ಜಾರಿ ಮಾಡಲಾಗಿದೆ. ವಿಪ್ ಉಲ್ಲಂಘಿಸಿ, ಪಕ್ಷದಿಂದ ಹೊರಬೀಳುವ ಧೈರ್ಯ ಮಾಡುವುದಿಲ್ಲ ಎಂಬ ನಂಬಿಕೆ ನಮಗಿದೆ. ಅಡ್ಡ ಮತದಾನದ ಸಾಧ್ಯತೆಯಿಲ್ಲ ಎಂದು ಗ್ರಾಮೀಣಾಭಿವೃದ್ದಿ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಭಾನುವಾರ ಇಲ್ಲಿನ ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಶೆಟ್ಟರ್, ಸ್ಪೀಕರ್ ಸೇರಿದಂತೆ ನಮ್ಮ ಪಕ್ಷದಲ್ಲಿ 121 ಶಾಸಕರು ಇದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಸಿಎಂ ಸದಾನಂದ ಗೌಡರ ಗೆಲುವು ಖಚಿತ ಎಂದರು.

ಯಡಿಯೂರಪ್ಪ ಅವರು ಸದ್ಯಕ್ಕಂತೂ ಮತ್ತೆ ಮುಖ್ಯಮಂತ್ರಿಯಾಗುವ ಅವಕಾಶಗಳಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ, ಬಿಜೆಪಿಯಲ್ಲಿ ಸಣ್ಣ ಪುಟ್ಟ ಮನಸ್ತಾಪಗಳಿದ್ದರೂ ಆಂತರಿಕ ಬಿಕ್ಕಟ್ಟು ಉಲ್ಬಣವಾಗಿಲ್ಲ ಎಂದು ಶೆಟ್ಟರ್ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+