ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಟ್ಟಾ ನಾಯ್ಡುಗೆ ಷರತ್ತುಬದ್ಧ ಜಾಮೀನು ಮಂಜೂರು

By Mahesh
|
Google Oneindia Kannada News

Katta subramanya Naidu
ಬೆಂಗಳೂರು, ಡಿ.12: ಕೆಐಎಡಿಬಿ ಹಗರಣದ ಆರೋಪಿಯಾಗಿರುವ ಕಟ್ಟಾ ಸುಬ್ರಮಣ್ಯ ನಾಯ್ಡು ಹಾಗೂ ಕಟ್ಟಾ ಜಗದೀಶ್ ಮತ್ತು ಇಟಸ್ಕಾ ಎಂಡಿ ಶ್ರೀನಿವಾಸ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ, ಲೋಕಾಯುಕ್ತ ಕೋರ್ಟ್ ಆದೇಶ ಹೊರಡಿಸಿದೆ.

ಹೈಕೋರ್ಟ್ ಕಟ್ಟಾ ಅವರಿಗೆ 3 ತಿಂಗಳ ಮಧ್ಯಂತರ ಮತ್ತು ಷರತ್ತುಬದ್ಧ ಜಾಮೀನು ನೀಡಿದ್ದು, ಐದು ಲಕ್ಷ ರು. ಬಾಂಡ್ ಸಲ್ಲಿಸಬೇಕೆಂದು ಆದೇಶಿಸಿದೆ. ಲಂಡನ್ ನಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯಬೇಕಿದ್ದರೆ ಲೋಕಾಯುಕ್ತ ಕೋರ್ಟ್ ಅನುಮತಿ ಪಡೆಯಬೇಕೆಂದು ತಿಳಿಸಿದೆ.

ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಟ್ಟಾ ಸುಬ್ರಮಣ್ಯ ನಾಯ್ಡು ಲಂಡನ್ ತೆರಳಬಹುದಾಗಿದೆ.

ಉಳಿದಂತೆ ಕೆಐಎಡಿಬಿ ಕಚೇರಿಗೆ ಆರೋಪಿಗಳು ಭೇಟಿ ನೀಡುವಂತಿಲ್ಲ, ಸಾಕ್ಷಿ ನಾಶ ಮಾಡುವಂತಿಲ್ಲ. 1ನೇ ಶನಿವಾರ ಹಾಗೂ 3ನೇ ಶನಿವಾರ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಕಚೇರಿಗೆ ಹಾಜರಾಗಬೇಕು ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.

English summary
KIADB land scam: Former Minister Katta Subamanya Naidu and his son BBMP member Katta Jagadish along with Itaska MD Srinvad have granted conditional bail by Lokayutka court today(Dec.12)
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X